AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ನದಿಗೆ ಹೊಸ ಡ್ಯಾಂ ನಿರ್ಮಿಸುವ ಕರ್ನಾಟಕದ ನಿರ್ಧಾರಕ್ಕೆ ಬ್ರೇಕ್​ ಹಾಕಿ: ಅಕ್ಬರುದ್ದೀನ್ ಓವೈಸಿ ಒತ್ತಾಯ

ತುಂಗಭದ್ರಾ ನದಿಗೆ ಅಡ್ಡಲಾಗಿ ಕರ್ನಾಟಕ ಹೊಸ ಅಣೆಕಟ್ಟು ನಿರ್ಮಿಸುವುದರಿಂದ ತೆಲಂಗಾಣದ ನೀರಿನ ಹರಿವಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅದನ್ನು ತಡೆಯಲು ಕ್ರಮಕೈಗೊಳ್ಳುವಂತೆ ಎಐಎಂಐಎಂ ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದರು.

ತುಂಗಭದ್ರಾ ನದಿಗೆ ಹೊಸ ಡ್ಯಾಂ ನಿರ್ಮಿಸುವ ಕರ್ನಾಟಕದ ನಿರ್ಧಾರಕ್ಕೆ ಬ್ರೇಕ್​ ಹಾಕಿ: ಅಕ್ಬರುದ್ದೀನ್ ಓವೈಸಿ ಒತ್ತಾಯ
ಅಕ್ಬರುದ್ದೀನ್ ಓವೈಸಿ
ವಿವೇಕ ಬಿರಾದಾರ
|

Updated on: Feb 14, 2024 | 8:28 AM

Share

ಹೈದರಾಬಾದ್​, ಫೆಬ್ರವರಿ 14: ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ಕರ್ನಾಟಕ ಹೊಸ ಅಣೆಕಟ್ಟು ನಿರ್ಮಿಸುವುದರಿಂದ ತೆಲಂಗಾಣದ (Telangana) ನೀರಿನ ಹರಿವಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅದನ್ನು ತಡೆಯಲು ಕ್ರಮಕೈಗೊಳ್ಳುವಂತೆ ಎಐಎಂಐಎಂ ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದರು. ತೆಲಂಗಾಣ ರಾಜ್ಯ ವಿಧಾನಸಭೆಯಲ್ಲಿ ಕೃಷ್ಣಾ ನದಿಗೆ ಸಂಬಂಧಿಸಿದ ‘ಸರ್ಕಾರದ ನಿರ್ಣಯ’ ಕೃಷ್ಣಾ ಮತ್ತು ಕೃಷ್ಣಾ ನದಿ ನಿರ್ವಹಣಾ ಮಂಡಳಿಯ ಯೋಜನೆಗಳು ಮತ್ತು ಸಂಬಂಧಿತ ವಿಷಯಗಳ ಮೇಲಿನ ಚರ್ಚೆಯಲ್ಲಿ ಅವರು ಪ್ರಸ್ತಾಪಿಸಿದರು.

ತುಂಗಭದ್ರಾ ಮಂಡಳಿ ಸಭೆಯಲ್ಲಿ ಪ್ರಸ್ತಾಪ

ಪ್ರಸ್ತುತ ತುಂಗಭದ್ರಾ ಅಣೆಕಟ್ಟಿನ ಹೂಳು ತುಂಬಿರುವುದರಿಂದ ಅದರ ಸಾಮರ್ಥ್ಯ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ತುಂಗಭದ್ರಾ ನದಿಗೆ ಹೊಸ ಅಣೆಕಟ್ಟು ನಿರ್ಮಿಸಲು ಕರ್ನಾಟಕ ನೀರಾವರಿ ಅಧಿಕಾರಿಗಳು 2018ರಲ್ಲಿ ನಡೆದ ತುಂಗಭದ್ರಾ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಹಲವು ವರ್ಷಗಳಿಂದ ಹೂಳು ನಿರ್ಮಾಣವಾಗಿರುವುದರಿಂದ ಅಣೆಕಟ್ಟೆಯ ಸಾಮರ್ಥ್ಯ ಗಣನೀಯವಾಗಿ ಕುಸಿದಿದ್ದು, ಹೂಳು ತೆಗೆಯುವುದು ಅಸಾಧ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ತುಂಗಭದ್ರಾ ಅಣೆಕಟ್ಟು ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ನೀರಿನ ದಾಹವನ್ನು ನೀಗಿಸುತ್ತಿದೆ. ಕರ್ನಾಟಕದ ಪ್ರಸ್ತಾವನೆಯನ್ನು ಮಂಡಳಿ ಸಭೆಯಲ್ಲಿ ಅನುಮೋದಿಸಲು ಸಾಧ್ಯವಿಲ್ಲ, ಏಕೆಂದರೆ ಇದನ್ನು ರಾಜ್ಯ ಸರ್ಕಾರಗಳು ನಿರ್ಧರಿಸಬೇಕು ಎಂದು ತೆಲಂಗಾಣ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಹೆಚ್ಚು ನೀರು ಬಿಡಬೇಕೆಂಬ ತಮಿಳುನಾಡು ಮನವಿಯನ್ನ ತಿರಸ್ಕರಿಸಿದ ಸಿಡಬ್ಯ್ಲೂಆರ್​​ಸಿ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ತುಂಗಭದ್ರಾ ಮಂಡಳಿ ಅಧ್ಯಕ್ಷ ಡಿ ರಂಗಾರೆಡ್ಡಿ, ಪ್ರಸ್ತುತ ಅಣೆಕಟ್ಟಿನ ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾದ ಕಾರಣ ಕರ್ನಾಟಕ ಸರ್ಕಾರ ತುಂಗಭದ್ರಾ ಮೇಲೆ 40 ಟಿಎಂಸಿ ಅಡಿ ಸಾಮರ್ಥ್ಯದ ಮತ್ತೊಂದು ಸ್ಟೋರೇಜ್ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂದು ಹೇಳಿದ್ದರು.

2020ರ ಅಂದಿನ ಬಿಜೆಪಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುಮತಿ ಪಡೆದ ಬಳಿಕ ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದಲ್ಲಿ 50 ಟಿಎಂಸಿ ಸಾಮರ್ಥ್ಯದ ಸಮತೋಲಿತ ಜಲಾಶಯವನ್ನು ನಿರ್ಮಿಸಲು ಮುಂದಾಗಿತ್ತು. ಇದರಿಂದ ತುಂಗಭದ್ರಾ ಅಣೆಕಟ್ಟು ಕೆಳಭಾಗದ ರಾಜ್ಯಗಳಿಗೆ ನೀರು ಹರಿವಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ಬಜೆಟ್​​ಗೂ ಮುನ್ನ ಸಮತೋಲಿತ ಅಣೆಕಟ್ಟು ಯೋಜನೆ ಜಾರಿ: ಡಿಕೆಶಿ ​

ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದ್ದು, ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡುವ ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ. ಸುಮಾರು 30 ಟಿಎಂಸಿಗೂ ಹೆಚ್ಚು ನೀರು ರಾಜ್ಯಕ್ಕೆ ನಷ್ಟವಾಗುತ್ತಿದೆ. ಆದ ಕಾರಣ ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣದ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗಿದೆ. ಈ ಯೋಜನೆಯಿಂದ ಈ ಭಾಗದ ರೈತರ ನೀರಿನ ಕೊರತೆ ಬಗೆಹರಿದಂತಾಗುತ್ತದೆ. ಈ ಯೋಜನೆ ಸಂಬಂಧ ತೆಲಂಗಾಣ, ಆಂಧ್ರ ಪ್ರದೇಶದ ಸರ್ಕಾರದ ಜತೆಗೆ ಮಾತನಾಡಲಾಗುವುದು. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಕೆಲಸ ಮಾಡಬೇಕಾಗಿದೆ. ಮುಂದಿನ ಬಜೆಟ್ ವೇಳೆಗೆ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು.

ತುಂಗಭದ್ರಾ ಅಣೆಕಟ್ಟು ಸಾಮರ್ಥ್ಯ

ತುಂಗಭದ್ರ ಅಣೆಕಟ್ಟು ಒಟ್ಟು101 ಟಿಎಂಸಿ ಅಡಿ ಶೇಖರಣಾ ಸಾಮರ್ಥ್ಯದ ದೊಡ್ಡ ಜಲಾಶಯ. ತುಂಗಭದ್ರಾ ಜಲಾಶಯದ ತಳದಲ್ಲಿ ಸುಮಾರು 31 ಟಿಎಂಸಿ ಅಡಿ ಹೂಳು ಸಂಗ್ರಹವಾಗಿದ್ದು, ಅದರ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ