AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಹರಾಜು ಪ್ರಕ್ರಿಯೆಗೆ EOI ಸಲ್ಲಿಸಿದ ಟಾಟಾ, ಅಮೆರಿಕಾ ಮೂಲದ ಇಂಟರಪ್ಸ್ ಇನ್ಕ್

ಖಾಸಗೀಕರಣಗೊಳ್ಳದಿದ್ದರೆ ಏರ್ ಇಂಡಿಯಾ ತನ್ನ ಹಾರಾಟ ನಿಲ್ಲಿಸಬೇಕಾಗುತ್ತದೆ ಎಂದು ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಈ ಹಿಂದೆ ಹೇಳಿಕೆ ನೀಡಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು.

ಏರ್ ಇಂಡಿಯಾ ಹರಾಜು ಪ್ರಕ್ರಿಯೆಗೆ EOI ಸಲ್ಲಿಸಿದ ಟಾಟಾ, ಅಮೆರಿಕಾ ಮೂಲದ ಇಂಟರಪ್ಸ್ ಇನ್ಕ್
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 07, 2022 | 10:43 AM

Share

ದೆಹಲಿ: ಸಾರ್ವಜನಿಕ ಸ್ವಾಮ್ಯದ ಪ್ರಸಿದ್ಧ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಖಾಸಗೀಕರಣದತ್ತ ಮುಖ ಮಾಡಿದೆ. ಇಂದು (ಡಿ.15) ನಡೆದ ಏರ್ ಇಂಡಿಯಾ ಹರಾಜು ಪ್ರಕ್ರಿಯೆ ಸಂಜೆಯ ವೇಳೆಗೆ ಮುಕ್ತಾಯಗೊಂಡಿದೆ. ಹರಾಜು ಪ್ರಕ್ರಿಯೆಯಲ್ಲಿ ಅಮೆರಿಕಾ ಮೂಲದ ಇಂಟರಪ್ಸ್ ಇನ್ಕ್ ಸಂಸ್ಥೆ ಏರ್ ಇಂಡಿಯಾ ಕೊಳ್ಳುವ ಮನ ಮಾಡಿದೆ. ದೇಶದ ವಿಮಾನಯಾನ ಸಂಸ್ಥೆಯನ್ನು ಖರೀದಿಸಲು ಆಸಕ್ತಿ ತೋರಿಸಿದೆ. ಜೊತೆಗೆ, ಟಾಟಾ ಗ್ರೂಪ್ ಮತ್ತು ಏರ್ ಇಂಡಿಯಾದ 209 ನೌಕರರು ರಚಿಸಿಕೊಂಡಿರುವ ಸಂಸ್ಥೆ ಹರಾಜಿನಲ್ಲಿ ಪಾಲ್ಗೊಳ್ಳಲು ಇಚ್ಛೆ ವ್ಯಕ್ತಪಡಿಸಿವೆ.

ಇಂಟರಪ್ಸ್ ಇನ್ಕ್ ಮುಖ್ಯಸ್ಥ ಲಕ್ಷ್ಮೀ ಪ್ರಸಾದ್, ನಮಗೆ ಶುಭ ಹಾರೈಸಿ. ನಾವು ನಮ್ಮ EOI (Expression of Interest) ಸಲ್ಲಿಸುತ್ತಿದ್ದೇವೆ. ಇದು ಭಾರತ ದೇಶಕ್ಕೆ ನಮ್ಮ ಕೊಡುಗೆಯಾಗಲಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಹರಾಜು ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು, ತಮ್ಮ ಆಸಕ್ತಿ (EOI) ಸೂಚಿಸಲು ಇಂದು ಕೊನೆಯ ದಿನವಾಗಿತ್ತು. ಆಸಕ್ತರು ಮುದ್ರಿತ ಪ್ರತಿ (Physical Copy) ಸಲ್ಲಿಸಲು ಡಿ.29 ಕೊನೆಯ ದಿನಾಂಕವಾಗಿದೆ. ಬಳಿಕ, ಮುಂದಿನ ಹಂತದ ಹರಾಜು ಪ್ರಕ್ರಿಯೆಗೆ ಆಯ್ಕೆಯಾದವರನ್ನು ಸರ್ಕಾರವು ಜನವರಿ 5, 2020ರ ಒಳಗಾಗಿ ಸೂಚಿಸಲಿದೆ.

ಖಾಸಗೀಕರಣಗೊಳ್ಳದಿದ್ದರೆ ಏರ್ ಇಂಡಿಯಾ ತನ್ನ ಹಾರಾಟ ನಿಲ್ಲಿಸಬೇಕಾಗುತ್ತದೆ ಎಂದು ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಈ ಹಿಂದೆ ಹೇಳಿಕೆ ನೀಡಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು.

Inside Story | ಸೆಂಟ್ರಲ್ ವಿಸ್ತಾ ನಂತರ ಟಾಟಾ ಪಾಲಾಗುವುದೇ ಏರ್ ಇಂಡಿಯಾ?

Published On - 9:41 pm, Mon, 14 December 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?