AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ರಾಯಭಾರ ಕಚೇರಿಯಿಂದ ನೆಕ್ಸಸ್ ಬ್ಯುಸಿನೆಸ್ ಇನ್‌ಕ್ಯುಬೇಟರ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ನವದೆಹಲಿಯ ಅಮೇರಿಕನ್ ಸೆಂಟರ್‌ನಲ್ಲಿ ಆಯೋಜಿಸಲಾದ ನೆಕ್ಸಸ್ 2025ರ ಫೆಬ್ರವರಿ 2ರಂದು 9 ವಾರಗಳ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಅರ್ಜಿಗಳನ್ನು ಸ್ವೀಕರಿಸುತ್ತಿದೆ ಎಂದು ನವದೆಹಲಿಯಲ್ಲಿರುವ ಯುಎಸ್ ರಾಯಭಾರ ಕಚೇರಿ ತಿಳಿಸಿದೆ. ತರಬೇತಿ ನೀಡಲು ಯುಎಸ್ ರಾಯಭಾರ ಕಚೇರಿಯು ಕನೆಕ್ಟಿಕಟ್ ವಿಶ್ವವಿದ್ಯಾನಿಲಯದಲ್ಲಿ ಜಾಗತಿಕ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿದೆ.

ಅಮೆರಿಕ ರಾಯಭಾರ ಕಚೇರಿಯಿಂದ ನೆಕ್ಸಸ್ ಬ್ಯುಸಿನೆಸ್ ಇನ್‌ಕ್ಯುಬೇಟರ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಭಾರತ- ಅಮೆರಿಕ
ಸುಷ್ಮಾ ಚಕ್ರೆ
|

Updated on: Dec 06, 2024 | 6:51 PM

Share

ನವದೆಹಲಿ: ನವದೆಹಲಿಯಲ್ಲಿನ ಯು.ಎಸ್. ರಾಯಭಾರ ಕಚೇರಿಯು ಅಲ್ಲಿನ ಅಮೆರಿಕನ್ ಸೆಂಟರ್‌ನಲ್ಲಿ ಉದ್ಯಮಿಗಳ ಮಾರ್ಗದರ್ಶನಕ್ಕಾಗಿ ಪ್ರತಿಷ್ಠಿತ ನೆಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. 9 ವಾರಗಳ ಈ ತರಬೇತಿಯು ಮುಂದಿನ ವರ್ಷ ಫೆಬ್ರವರಿ 2ರಲ್ಲಿ ಆರಂಭವಾಗಲಿದ್ದು, ನೆಕ್ಸಸ್‌ ಸರಣಿಯಲ್ಲಿ ಇದು 20ನೇ ಕಾರ್ಯಕ್ರಮವಾಗಿದೆ.

ನೆಕ್ಸಸ್‌ ಕಾರ್ಯಕ್ರಮದಲ್ಲಿ ಭಾರತದ 15 ನವೋದ್ಯಮಗಳಿಗೆ ಭಾರತೀಯ ಮತ್ತು ಅಮೆರಿಕನ್‌ ತಜ್ಞರಿಂದ ತರಬೇತಿ ಪಡೆಯುವ ಅವಕಾಶ ದೊರೆಯಲಿದೆ. ಈಗಿನ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸಲು ಮಾರುಕಟ್ಟೆಯ ನಾಡಿಮಿಡಿತ ಅರಿಯಲು ಮತ್ತು ಗುರಿ ನಿಗದಿ ಪಡಿಸಿಕೊಳ್ಳಲು ಈ ತಜ್ಞರು ನೆರವಾಗಲಿದ್ದಾರೆ. ನವೋದ್ಯಮಗಳ ಮೇಲೆ ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಉದ್ಯಮಿಗಳ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಚರ್ಚಿಸಲಾಗುವುದು.

ಇದನ್ನೂ ಓದಿ: Fact Check: ಚೆನ್ನೈನ ಮರೀನಾ ಬೀಚ್‌ ಬಳಿ ಜಲಾವೃತಗೊಂಡ ಬೀದಿಗಳು ಎಂದು ಸೌದಿ ಅರೇಬಿಯಾದ ವಿಡಿಯೋ ವೈರಲ್

ಆರಂಭಿಕ 9 ವಾರಗಳ ತರಬೇತಿ ಕಾರ್ಯಕ್ರಮದ ನಂತರ 4 ಕಂಪನಿಗಳು ನೆಕ್ಸಸ್‌ನಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ. ಹೆಚ್ಚುವರಿ 8 ತಿಂಗಳವರೆಗೆ ಇನ್ಕ್ಯುಬೇಟರ್ ಸೌಲಭ್ಯಗಳು ಮತ್ತು ನೆಟ್‌ವರ್ಕ್‌ಗೆ ಸಂಪೂರ್ಣ ಪ್ರವೇಶವನ್ನು ನೀಡಲಾಗುತ್ತದೆ.

ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು ಜನವರಿ 5ರೊಳಗಾಗಿ ಇಲ್ಲಿ ಅರ್ಜಿ ಸಲ್ಲಿಸಬೇಕು: www.startupnexus.in ಆಯ್ಕೆಯಾದವರಿಗೆ ಜನವರಿ 17ರೊಳಗೆ ಸೂಚಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು