AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜತೆ ಮತ್ತೆ ಶಾಂತಿ ಮಾತುಕತೆ, ದಾಳಿ ರದ್ದು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ ಮೇಲಿನ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಶಾಂತಿ ಮಾತುಕತೆಗೆ ಆದ್ಯತೆ ನೀಡಿದ್ದಾರೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಕಡಿಮೆಗೊಳಿಸಲು ರಾಜತಾಂತ್ರಿಕ ಮಾರ್ಗ ತೆರೆದಿದ್ದು, ಹಾರ್ಮುಜ್ ಜಲಸಂಧಿ ಮುಕ್ತಗೊಳಿಸುವುದು ಹಾಗೂ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ತಡೆ ಒಡ್ಡುವುದು ಈ ಮಾತುಕತೆಯ ಮುಖ್ಯ ಉದ್ದೇಶಗಳಾಗಿವೆ. ಯುದ್ಧದ ಬದಲು ಮಾತುಕತೆಯಿಂದ ಗಲ್ಫ್ ಪ್ರದೇಶದ ಆರ್ಥಿಕತೆಗೆ ನೆರವಾಗಲಿದೆ ಎಂಬ ಆಶಯವಿದೆ.

ಇರಾನ್ ಜತೆ ಮತ್ತೆ ಶಾಂತಿ ಮಾತುಕತೆ, ದಾಳಿ ರದ್ದು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on:Aug 03, 2026 | 8:53 AM

Share

ವಾಷಿಂಗ್ಟನ್, ಆಗಸ್ಟ್​ 03: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ, ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಗಳು ಇಂದಿನಿಂದ ಆರಂಭವಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ದೃಢಪಡಿಸಿದ್ದಾರೆ. ಇರಾನ್ ಮೇಲಿನ ಪ್ರಬಲ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಅಮೆರಿಕ, ಶಾಂತಿ ಒಪ್ಪಂದಕ್ಕೆ ಆದ್ಯತೆ ನೀಡಲು ನಿರ್ಧರಿಸಿದೆ. ಏರ್ ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಮ್ಮ ಗುರಿ ಅನಗತ್ಯವಾಗಿ ಜನರ ಜೀವ ತೆಗೆಯುವುದಲ್ಲ. ಮಾತುಕತೆಯ ಮಾರ್ಗ ತೆರೆದಿದ್ದು, ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ.

ದಾಳಿ ಮುಂದೂಡಿಕೆ: ಇರಾನ್‌ನ ಇಂಧನ ಮೂಲಸೌಕರ್ಯಗಳ ಮೇಲೆ ಭಾನುವಾರ ನಡೆಸಲು ಯೋಜಿಸಲಾಗಿದ್ದ ಬೃಹತ್ ದಾಳಿಯನ್ನು ಅಮೆರಿಕ ಮುಂದೂಡಿದೆ.ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ (MBS), ಕತಾರ್ ಹಾಗೂ ಯುಎಇ ನಾಯಕರು ಟ್ರಂಪ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ಯುದ್ಧದ ಬದಲು ರಾಜತಾಂತ್ರಿಕ ಮಾರ್ಗಕ್ಕೆ ಅವಕಾಶ ನೀಡುವಂತೆ ಕೋರಿದ್ದರು. ಸಮರ ಉಲ್ಬಣಗೊಂಡರೆ ಇಡೀ ಗಲ್ಫ್ ಪ್ರದೇಶದ ಆರ್ಥಿಕತೆಗೆ ಧಕ್ಕೆಯಾಗಲಿದೆ ಎಂಬ ಕಳವಳವನ್ನು ಅವರು ವ್ಯಕ್ತಪಡಿಸಿದ್ದರು.

ತೈಲ ಮಾರ್ಗ ಮುಕ್ತಗೊಳಿಸುವ ಗುರಿ: ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸುವುದು ಹಾಗೂ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ತಡೆ ಒಡ್ಡುವುದು ಈ ಮಾತುಕತೆಯ ಮುಖ್ಯ ಪ್ರಸ್ತಾವನೆಯಾಗಿದೆ.

ಮತ್ತಷ್ಟು ಓದಿ: ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

ಇರಾನ್ ನಿಲುವು: ಇರಾನ್‌ನ ವಿದೇಶಾಂಗ ಸಚಿವಾಲಯವು ಹಾರ್ಮುಜ್ ಜಲಸಂಧಿಯ ಸಾಗಣೆ ನಿಯಮಗಳು ಯುದ್ಧಕ್ಕೂ ಮೊದಲು ಇದ್ದ ಸ್ಥಿತಿಗೆ ಸುಲಭವಾಗಿ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜಲಸಂಧಿಯ ಭದ್ರತೆ ಹಾಗೂ ನೌಕಾಯಾನ ಮಾರ್ಗದ ಕುರಿತು ಓಮನ್ ದೇಶದ ಜೊತೆ ಇರಾನ್ ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತಿದೆ.

ಆರು ತಿಂಗಳ ಸಂಘರ್ಷ: ಇಸ್ರೇಲ್ ಮತ್ತು ಅಮೆರಿಕದ ಪಡೆಗಳು ಇರಾನ್ ಮೇಲೆ ನಡೆಸಿದ ಮಿಲಿಟರಿ ಕಾರ್ಯಾಚರಣೆಗಳ ನಂತರ ಮಧ್ಯಪ್ರಾಚ್ಯದಲ್ಲಿ ಭಾರಿ ಬಿಕ್ಕಟ್ಟು ಎದುರಾಗಿತ್ತು. ಇರಾನ್ ಬೆಂಬಲಿತ ಗುಂಪುಗಳು ಮತ್ತು ಅಮೆರಿಕದ ಪಡೆಗಳ ನಡುವೆ ಸರಣಿ ದಾಳಿಗಳು ನಡೆದಿದ್ದವು.

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದರಿಂದ ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆ ವ್ಯತ್ಯಯಗೊಂಡು ತೈಲ ಬೆಲೆಗಳಲ್ಲಿ ಏರಿಕೆ ಕಂಡುಬಂದಿತ್ತು. ಇದೀಗ ಶಾಂತಿ ಮಾತುಕತೆಯ ಭರವಸೆಯಿಂದಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ಸಣ್ಣ ಮಟ್ಟದ ಚೇತರಿಕೆ ಕಂಡುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:53 am, Mon, 3 August 26

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’