Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಲಸಿಕೆ ರಫ್ತು ನಿರ್ಬಂಧ ತೆರವು: ಜೋ ಬೈಡನ್, ಜೈಶಂಕರ್​ಗೆ ಧನ್ಯವಾದ ಹೇಳಿದ ಅದಾರ್ ಪೂನಾವಾಲಾ

ಲಸಿಕೆ ಉತ್ಪಾದನೆಗೆ ಬೇಕಿರುವ ಅತಿಮುಖ್ಯ ಕಚ್ಚಾವಸ್ತುಗಳ ರಫ್ತಿಗೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಹಿಂಪಡೆದಿದೆ. ವಿಶ್ವದ ಹಲವು ದೇಶಗಳು ಒಗ್ಗೂಡಿ ಕೊರೊನಾ ಪಿಡುಗಿನ ವಿರುದ್ಧ ಹೋರಾಡಲು ಅಮೆರಿಕದ ಈ ಕ್ರಮ ಸಹಾಯಕ ಎಂದು ಅವರು ಹೇಳಿದ್ದಾರೆ.

ಅಮೆರಿಕದಿಂದ ಲಸಿಕೆ ರಫ್ತು ನಿರ್ಬಂಧ ತೆರವು: ಜೋ ಬೈಡನ್, ಜೈಶಂಕರ್​ಗೆ ಧನ್ಯವಾದ ಹೇಳಿದ ಅದಾರ್ ಪೂನಾವಾಲಾ
ಅದಾರ್ ಪೂನಾವಾಲ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 04, 2021 | 8:37 PM

ದೆಹಲಿ: ಅಮೆರಿಕದ ಸರ್ಕಾರದ ನೀತಿ ಬದಲಾವಣೆಗೆ ಕಾರಣರಾಗುವ ಮೂಲಕ ಭಾರತ ಮತ್ತು ಇತರ ದೇಶಗಳಲ್ಲಿ ಲಸಿಕೆ ಉತ್ಪಾದನೆಗೆ ಹೊಸ ವೇಗ ನೀಡಲು ಅವಕಾಶ ಮಾಡಿಕೊಟ್ಟ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಅಭಿನಂದಿಸಿದ್ದಾರೆ.

ಲಸಿಕೆ ಉತ್ಪಾದನೆಗೆ ಬೇಕಿರುವ ಅತಿಮುಖ್ಯ ಕಚ್ಚಾವಸ್ತುಗಳ ರಫ್ತಿಗೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಹಿಂಪಡೆದಿದೆ. ವಿಶ್ವದ ಹಲವು ದೇಶಗಳು ಒಗ್ಗೂಡಿ ಕೊರೊನಾ ಪಿಡುಗಿನ ವಿರುದ್ಧ ಹೋರಾಡಲು ಅಮೆರಿಕದ ಈ ಕ್ರಮ ಸಹಾಯಕ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷರು, ಶ್ವೇತಭವನದ ಸಿಬ್ಬಂದಿ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಪ್ರಯತ್ನಗಳಿಗೆ ಧನ್ಯವಾದ. ಈ ನೀತಿ ಬದಲಾವಣೆಯಿಂದ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಲಸಿಕೆ ಉತ್ಪಾದನೆಯ ವೇಗ ಹೆಚ್ಚಾಗಲಿದೆ. ನಮ್ಮ ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಾಗುವುದರೊಂದಿಗೆ ಈ ಮಹಾಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ಬಂದಂತೆ ಆಗಿದೆ’ ಎಂದು ಅವರು ಹೇಳಿದ್ದಾರೆ.

ಅದಾರ್ ಪೂನಾವಾಲರ ಟ್ವೀಟ್​ ಪೋಸ್ಟ್ ಆದ​ ತಕ್ಷಣ ಪ್ರತಿಕ್ರಿಯಿಸಿದ ಜೈಶಂಕರ್, ‘ಲಸಿಕೆ ಉತ್ಪಾದನಾ ವ್ಯವಸ್ಥೆಯನ್ನು ಸುರಕ್ಷಿತವಾಗಿ ಇರಿಸಿಕೊಳ್ಳುವುದು ಭಾರತದ ರಾಜತಾಂತ್ರಿಕರ ಆದ್ಯತೆಯಾಗಿದೆ’ ಎಂದು ಹೇಳಿದ್ದಾರೆ. ಲಸಿಕೆ ಉತ್ಪಾದನೆಯ ಮೇಲೆ ಕಳೆದ ಫೆಬ್ರುವರಿಯಲ್ಲಿ ಅಮೆರಿಕ ಸರ್ಕಾರವು ರಕ್ಷಣಾ ಉತ್ಪಾದನಾ ಕಾಯ್ದೆಯ ಅನ್ವಯ ನಿರ್ಬಂಧಗಳನ್ನು ಹೇರಿತ್ತು. ಫಿಜರ್ ಸೇರಿದಂತೆ ಹಲವು ಸ್ಥಳೀಯ ಲಸಿಕಾ ತಯಾರಿಕಾ ಕಂಪನಿಗಳು ಅಮೆರಿಕದ ಜನರಿಗೆ ಬೇಕಾಗುವಷ್ಟು ಲಸಿಕೆಗಳನ್ನು ಮೊದಲು ಉತ್ಪಾದಿಸಬೇಕೆಂಬುದು ಅಮೆರಿಕದ ನಿಲುವಾಗಿತ್ತು.

ಫಿಜರ್ ಮತ್ತು ಮಾಡೆರ್ನಾ ಕಂಪನಿಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಾಗಬೇಕೆಂದು ಶ್ವೇತಭವನ ಬಯಸುತ್ತಿದೆ. ಅಮೆರಿಕದ ಎಲ್ಲ ನಾಗರಿಕರಿಗೂ ಜುಲೈ 4ರ ಒಳಗೆ ಲಸಿಕೆ ಸಿಗುವಂತೆ ಮಾಡುವುದು ಅಮೆರಿಕದ ಸರ್ಕಾರದ ಉದ್ದೇಶ. ಬೈಡೆನ್ ಆಡಳಿತವು ಈಗ ದೃಢೀಕೃತ ಲಸಿಕೆಗಳ ಲಭ್ಯತೆಯ ಬಗ್ಗೆ ಖಾತ್ರಿಹೊಂದಿದೆ. ಹೀಗಾಗಿಯೇ ಆಸ್ಟ್ರಾಜೆನೆಕಾ, ನೊವಾವ್ಯಾಕ್ಸ್​ ಮತ್ತು ಸನೊಫಿ ಲಸಿಕೆ ತಯಾರಿಕೆ ಕಂಪನಿಗಳ ಮೇಲಿದ್ದ ರಕ್ಷಣಾ ಉತ್ಪಾದನಾ ಕಾಯ್ದೆಯನ್ವಯ ವಿಧಿಸಿದ್ದ ನಿರ್ಬಂಧ ಹಿಂಪಡೆದಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಕಳೆದ ತಿಂಗಳು ಅಮೆರಿಕಕ್ಕೆ ಭೇಟಿ ನೀಡಿದ್ದರು. ಲಸಿಕೆ ಉತ್ಪಾದನೆಗೆ ಹೊಸ ವೇಗ ಸಿಗುವಂತೆ ಮಾಡಲು ಅಮೆರಿಕ ಸಹಕಾರದ ಖಾತ್ರಿ ಪಡೆದುಕೊಳ್ಳುವುದ ಅವರ ಉದ್ದೇಶವಾಗಿತ್ತು. ಅಮೆರಿಕದಲ್ಲಿರುವ ಹೆಚ್ಚುವರಿ ಲಸಿಕಾ ಸಂಗ್ರಹದಿಂದಲೂ ಭಾರತಕ್ಕೆ ಲಸಿಕೆ ಪೂರೈಸಲು ಅಮೆರಿಕ ಒಪ್ಪಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿನ್ನೆಯಷ್ಟೇ (ಜೂನ್ 3) ಮಾತನಾಡಿದ್ದ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ 2.5 ಕೋಟಿ ಡೋಸ್ ಲಸಿಕೆಗಳನ್ನು ಭಾರತ ಮತ್ತು ಇತರ ದೇಶಗಳಿಗೆ ಮುಂದಿನ ದಿನಗಳಲ್ಲಿ ಕಳುಹಿಸಲಾಗುವುದು ಎಂದು ಭರವಸೆ ನೀಡಿದ್ದರು. ಈ ತಿಂಗಳ ಅಂತ್ಯದ ಹೊತ್ತಿಗೆ ಅಮೆರಿಕ ಒಟ್ಟು 8 ಕೋಟಿ ಡೋಸ್ ಲಸಿಕೆಗಳನ್ನು ವಿಶ್ವದ ವಿವಿಧ ದೇಶಗಳಿಗೆ ರಫ್ತು ಮಾಡಲು ಉದ್ದೇಶಿಸಿದೆ.

(US Lifts Embargo on Coronavirs vaccine Adar Poonawalla Thanks Joe Biden and Jaishankar As US Lifts Vaccine Embargo)

ಇದನ್ನೂ ಓದಿ: ಬ್ರಿಟನ್​ನಲ್ಲಿ 12-15 ವಯೋಮಾನದ ಮಕ್ಕಳಿಗೆ ಫೈಜರ್ ಕೊರೊನಾವೈರಸ್ ಲಸಿಕೆ ನೀಡಲು ಅನುಮೋದನೆ

ಇದನ್ನೂ ಓದಿ: ಲಸಿಕೆ ನೀಡಿಕೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ; ಶೀಘ್ರವೇ ಮಕ್ಕಳಿಗೂ ಲಸಿಕೆ: ವಿ ಕೆ ಪೌಲ್

Published On - 8:34 pm, Fri, 4 June 21

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ