AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ

ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗುವ ನಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಸ್ಥಳೀಯ ಅರ್ಚಕರಿಗೆ ಮತ್ತು ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಖಲೀಫಾ ಹೇಳಿದ್ದಾರೆ.

ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ
ಕಾಶಿಯಲ್ಲಿ ಮದುವೆಯಾದ ಮುಸ್ಲಿಂ ದಂಪತಿImage Credit source: Hindustan Times
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 20, 2022 | 12:51 PM

Share

ವಾರಣಾಸಿ: ಮುಸ್ಲಿಂ ಸಮುದಾಯಕ್ಕೆ (Muslim) ಸೇರಿದ ಅಮೆರಿಕ ಪ್ರಜೆಯೊಬ್ಬರು 18 ವರ್ಷಗಳಿಂದ ತನ್ನೊಂದಿಗೆ ವಾಸಿಸುತ್ತಿರುವ ಗರ್ಲ್​​​​ಫ್ರೆಂಡ್​​ನ್ನು ಹಿಂದೂ ವಿವಾಹ ವಿಧಿಗಳ (Hindu rituals) ಪ್ರಕಾರ ಈ ಪುರಾತನ ಪಟ್ಟಣದ ಪ್ರಸಿದ್ಧ ತ್ರಿಲೋಚನ ದೇವಸ್ಥಾನದಲ್ಲಿ (Trilochan temple) ಶನಿವಾರ ವಿವಾಹವಾಗಿದ್ದಾರೆ. ಕಿಯಾಮಾ ದಿನ್ ಖಲೀಫಾ ಮತ್ತು ಅವರ ಗರ್ಲ್​​​​ಫ್ರೆಂಡ್ ಕೇಶಾ ಖಲೀಫಾ ಮುಸ್ಲಿಂ ಕುಟುಂಬಗಳಲ್ಲಿ ಹುಟ್ಟಿ ಬೆಳೆದಿದ್ದು, ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ತಮ್ಮ ನಿರ್ಧಾರ ಬಗ್ಗೆ ವಿಷಾದಿಸುವುದಿಲ್ಲ ಎಂದು ಕಿಯಾಮಾ ಹೇಳಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗುವ ನಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಸ್ಥಳೀಯ ಅರ್ಚಕರಿಗೆ ಮತ್ತು ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಖಲೀಫಾ ಹೇಳಿದ್ದಾರೆ. ಖಲೀಫಾ ಅವರು  ವ್ಯಾಪಾರ ಮತ್ತು ಕೃಷಿ ಭೂಮಿಯನ್ನು ಹೊಂದಿದ್ದಾರೆ.  ನಾವು ಕೊನೆಯ ಬಾರಿಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ವಾರಣಾಸಿಗೆ ಭೇಟಿ ನೀಡಿದಾಗ 5 ವರ್ಷಗಳ ಹಿಂದೆ ಸರಳವಾಗಿ ಮದುವೆಯಾಗುವ  ಬಗ್ಗೆ ಯೋಚಿಸಿದೆವು ಎಂದು ಖಲೀಫಾ ಹೇಳಿದ್ದಾರೆ. “ನಮ್ಮ ಕೊನೆಯ ಪ್ರವಾಸವು ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು. ಆದರೆ ನಾವು ಈ ರೀತಿ ಮದುವೆಯಾಗುತ್ತೇವೆ ಎಂದು ಭಾವಿಸಿರಲಿಲ್ಲ. ಕೆಲವು ದಿನಗಳ ಹಿಂದೆ ನಾವು ವಾರಣಾಸಿಗೆ ನಮ್ಮ ಭೇಟಿಯನ್ನು ಯೋಜಿಸುತ್ತಿದ್ದಾಗ ನಾವು ಅದರ ಬಗ್ಗೆ ಮಾತನಾಡಿದಾಗ ನನ್ನ ಗೆಳತಿ ಸರಿ ಎಂದು ಒಪ್ಪಿದರು ಎಂದು ಖಲೀಫಾ ಹೇಳಿದ್ದಾರೆ.

ವಾರಣಾಸಿಗೆ ಭೇಟಿ ನೀಡಿದಾಗ ಖಲೀಫಾ ತನ್ನ ಗೈಡ್ ರಾಹುಲ್ ಕುಮಾರ್ ದುಬೆ ಅವರೊಂದಿಗೆ ವಿಷಯಗಳನ್ನು ಚರ್ಚಿಸಿದರು. ಅವರು ಮದುವೆಯನ್ನು ಆಯೋಜಿಸಲು ಸಹಾಯ ಮಾಡಿದರು. ನಾವು ಪ್ರತಿನಿತ್ಯ ಅನೇಕ ವಿದೇಶಿ ಪ್ರವಾಸಿಗರನ್ನು ಭೇಟಿಯಾಗುತ್ತೇವೆ. ಆದರೆ ದಂಪತಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಬಯಸಿದ್ದಾರೆ. ಅವರು ಈ ನಿರ್ಧಾರ ಬಗ್ಗೆ ಗಂಭೀರವಾಗಿರುವುದನ್ನು ನಾನು ತಿಳಿದಾಗ, ನಾನು ಅವರಿಗೆ ಸಹಾಯ ಮಾಡಲು ಯೋಚಿಸಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ವಿಧಿವಿಧಾನಗಳು ಮತ್ತು ಆಚರಣೆಗಳನ್ನು ಆಚರಿಸಲಾಗುತ್ತದೆ ಎಂದು ಖಚಿತಪಡಿಸಿದ ನಂತರ ಸನಾತನ ಧರ್ಮದ ಪ್ರಕಾರ ಮದುವೆ ಆಯೋಜಿಸಲಾಗಿದೆ ಎಂದು ದುಬೆ ಹೇಳಿದ್ದಾರೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು