AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ

ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗುವ ನಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಸ್ಥಳೀಯ ಅರ್ಚಕರಿಗೆ ಮತ್ತು ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಖಲೀಫಾ ಹೇಳಿದ್ದಾರೆ.

ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ
ಕಾಶಿಯಲ್ಲಿ ಮದುವೆಯಾದ ಮುಸ್ಲಿಂ ದಂಪತಿImage Credit source: Hindustan Times
TV9 Web
| Edited By: |

Updated on: Sep 20, 2022 | 12:51 PM

Share

ವಾರಣಾಸಿ: ಮುಸ್ಲಿಂ ಸಮುದಾಯಕ್ಕೆ (Muslim) ಸೇರಿದ ಅಮೆರಿಕ ಪ್ರಜೆಯೊಬ್ಬರು 18 ವರ್ಷಗಳಿಂದ ತನ್ನೊಂದಿಗೆ ವಾಸಿಸುತ್ತಿರುವ ಗರ್ಲ್​​​​ಫ್ರೆಂಡ್​​ನ್ನು ಹಿಂದೂ ವಿವಾಹ ವಿಧಿಗಳ (Hindu rituals) ಪ್ರಕಾರ ಈ ಪುರಾತನ ಪಟ್ಟಣದ ಪ್ರಸಿದ್ಧ ತ್ರಿಲೋಚನ ದೇವಸ್ಥಾನದಲ್ಲಿ (Trilochan temple) ಶನಿವಾರ ವಿವಾಹವಾಗಿದ್ದಾರೆ. ಕಿಯಾಮಾ ದಿನ್ ಖಲೀಫಾ ಮತ್ತು ಅವರ ಗರ್ಲ್​​​​ಫ್ರೆಂಡ್ ಕೇಶಾ ಖಲೀಫಾ ಮುಸ್ಲಿಂ ಕುಟುಂಬಗಳಲ್ಲಿ ಹುಟ್ಟಿ ಬೆಳೆದಿದ್ದು, ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ತಮ್ಮ ನಿರ್ಧಾರ ಬಗ್ಗೆ ವಿಷಾದಿಸುವುದಿಲ್ಲ ಎಂದು ಕಿಯಾಮಾ ಹೇಳಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗುವ ನಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಸ್ಥಳೀಯ ಅರ್ಚಕರಿಗೆ ಮತ್ತು ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಖಲೀಫಾ ಹೇಳಿದ್ದಾರೆ. ಖಲೀಫಾ ಅವರು  ವ್ಯಾಪಾರ ಮತ್ತು ಕೃಷಿ ಭೂಮಿಯನ್ನು ಹೊಂದಿದ್ದಾರೆ.  ನಾವು ಕೊನೆಯ ಬಾರಿಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ವಾರಣಾಸಿಗೆ ಭೇಟಿ ನೀಡಿದಾಗ 5 ವರ್ಷಗಳ ಹಿಂದೆ ಸರಳವಾಗಿ ಮದುವೆಯಾಗುವ  ಬಗ್ಗೆ ಯೋಚಿಸಿದೆವು ಎಂದು ಖಲೀಫಾ ಹೇಳಿದ್ದಾರೆ. “ನಮ್ಮ ಕೊನೆಯ ಪ್ರವಾಸವು ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು. ಆದರೆ ನಾವು ಈ ರೀತಿ ಮದುವೆಯಾಗುತ್ತೇವೆ ಎಂದು ಭಾವಿಸಿರಲಿಲ್ಲ. ಕೆಲವು ದಿನಗಳ ಹಿಂದೆ ನಾವು ವಾರಣಾಸಿಗೆ ನಮ್ಮ ಭೇಟಿಯನ್ನು ಯೋಜಿಸುತ್ತಿದ್ದಾಗ ನಾವು ಅದರ ಬಗ್ಗೆ ಮಾತನಾಡಿದಾಗ ನನ್ನ ಗೆಳತಿ ಸರಿ ಎಂದು ಒಪ್ಪಿದರು ಎಂದು ಖಲೀಫಾ ಹೇಳಿದ್ದಾರೆ.

ವಾರಣಾಸಿಗೆ ಭೇಟಿ ನೀಡಿದಾಗ ಖಲೀಫಾ ತನ್ನ ಗೈಡ್ ರಾಹುಲ್ ಕುಮಾರ್ ದುಬೆ ಅವರೊಂದಿಗೆ ವಿಷಯಗಳನ್ನು ಚರ್ಚಿಸಿದರು. ಅವರು ಮದುವೆಯನ್ನು ಆಯೋಜಿಸಲು ಸಹಾಯ ಮಾಡಿದರು. ನಾವು ಪ್ರತಿನಿತ್ಯ ಅನೇಕ ವಿದೇಶಿ ಪ್ರವಾಸಿಗರನ್ನು ಭೇಟಿಯಾಗುತ್ತೇವೆ. ಆದರೆ ದಂಪತಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಬಯಸಿದ್ದಾರೆ. ಅವರು ಈ ನಿರ್ಧಾರ ಬಗ್ಗೆ ಗಂಭೀರವಾಗಿರುವುದನ್ನು ನಾನು ತಿಳಿದಾಗ, ನಾನು ಅವರಿಗೆ ಸಹಾಯ ಮಾಡಲು ಯೋಚಿಸಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ವಿಧಿವಿಧಾನಗಳು ಮತ್ತು ಆಚರಣೆಗಳನ್ನು ಆಚರಿಸಲಾಗುತ್ತದೆ ಎಂದು ಖಚಿತಪಡಿಸಿದ ನಂತರ ಸನಾತನ ಧರ್ಮದ ಪ್ರಕಾರ ಮದುವೆ ಆಯೋಜಿಸಲಾಗಿದೆ ಎಂದು ದುಬೆ ಹೇಳಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ