AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 2ನೇ ಅಲೆಗೆ ಸಿಲುಕಿರುವ ಭಾರತದೊಂದಿಗೆ ಒಗ್ಗಟ್ಟಿನ ಮಂತ್ರ ಪಠಿಸುತ್ತಿದೆ ಯುಎಸ್​; ಸಂದೇಶ ನೀಡಲಿರುವ ಕಮಲಾ ಹ್ಯಾರಿಸ್​

ಕೊವಿಡ್​ 19 ಎರಡನೇ ಅಲೆ ತೀವ್ರವಾಗಿರುವ ಭಾರತಕ್ಕೆ ಸಹಾಯ ಮಾಡಲು ಸಿದ್ಧ ಎಂದು ಈಗಾಗಲೇ ಅಮೆರಿಕ ತಿಳಿಸಿದೆ. ಆಕ್ಸಿಜನ್​ ಸೇರಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಮೆರಿಕಕ್ಕೆ ಕಳಿಸಿದೆ.

ಕೊವಿಡ್​ 19 2ನೇ ಅಲೆಗೆ ಸಿಲುಕಿರುವ ಭಾರತದೊಂದಿಗೆ ಒಗ್ಗಟ್ಟಿನ ಮಂತ್ರ ಪಠಿಸುತ್ತಿದೆ ಯುಎಸ್​; ಸಂದೇಶ ನೀಡಲಿರುವ ಕಮಲಾ ಹ್ಯಾರಿಸ್​
ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
Lakshmi Hegde
|

Updated on: May 06, 2021 | 1:28 PM

Share

ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿರುವ ಭಾರತದೊಂದಿಗೆ ಒಗ್ಗಟ್ಟಾಗಿರಬೇಕು ಎಂಬ ಸಂದೇಶವನ್ನು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಅವರು ಶುಕ್ರವಾರ ( ಮೇ 7)ದಂದು ನೀಡಲಿದ್ದಾರೆ. ಹಾಗೇ, ಕೊರೊನಾ ವೈರಸ್ ಸಾಂಕ್ರಾಮಿಕದ ಅಂತ್ಯಕ್ಕೆ, ಜೀವಗಳ ರಕ್ಷಣೆಗಾಗಿ ಭಾರತದೊಂದಿಗೆ ಅಮೆರಿಕ ಸದಾ ಪಾಲುದಾರನಾಗಿ ಇರುತ್ತದೆ ಎಂಬ ಮಾತನ್ನು ಅವರು ಈ ವೇಳೆ ಆಡಲಿದ್ದಾರೆ.

ಭಾರತದಲ್ಲಿ ಯುಎಸ್​​ನಿಂದ ಕೊವಿಡ್​ ನಿಯಂತ್ರಣಾ ಕ್ರಮಗಳನ್ನು ಹೆಚ್ಚಿಸುವುದು ಎಂಬ ವಿಚಾರದ ಬಗ್ಗೆ ಆನ್​​ಲೈನ್ ಮೂಲಕ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕಮಲಾ ಹ್ಯಾರಿಸ್ ಮಾತನಾಡಲಿದ್ದಾರೆ. ಈ ವೇಳೆ ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್​ನ್ನು ನಿಯಂತ್ರಿಸಲು ನಮ್ಮ ಸಹಕಾರ ಸಂಪೂರ್ಣವಾಗಿ ಇರಲಿದೆ, ನಿಮ್ಮೊಂದಿಗೆ ಒಗ್ಗಟ್ಟಾಗಿ ಇರುತ್ತೇವೆ ಎಂಬ ಸಂದೇಶವನ್ನು ಅವರು ನೀಡಲಿದ್ದಾರೆ ಎಂದು ಯುಎಸ್​ ರಾಜ್ಯ ಇಲಾಖೆಯ ದಕ್ಷಿಣ ಮತ್ತು ಕೇಂದ್ರ ಏಷ್ಯಾ ಬ್ಯೂರೊ ತಿಳಿಸಿದೆ. ಈ ಕಾರ್ಯಕ್ರಮ ಶುಕ್ರವಾರ ಸಂಜೆ ಹೊತ್ತಿಗೆ ನಡೆಯಲಿದೆ.

ಕೊವಿಡ್​ 19 ಎರಡನೇ ಅಲೆ ತೀವ್ರವಾಗಿರುವ ಭಾರತಕ್ಕೆ ಸಹಾಯ ಮಾಡಲು ಸಿದ್ಧ ಎಂದು ಈಗಾಗಲೇ ಅಮೆರಿಕ ತಿಳಿಸಿದೆ. ಆಕ್ಸಿಜನ್​ ಸೇರಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಮೆರಿಕಕ್ಕೆ ಕಳಿಸಿದೆ. ಕೊವಿಡ್ ಮೊದಲ ಅಲೆಯಲ್ಲಿ ಭಾರತ ಅಮೆರಿಕಕ್ಕೆ ಸಹಾಯ ಮಾಡಿತ್ತು. ಜೀವರಕ್ಷಕ ರೆಮ್​ಡೆಸಿವಿರ್​ನ್ನು ಕಳಿಸಿತ್ತು. ಅದನ್ನು ನೆನಪಿಸಿಕೊಂಡ ಜೋ ಬೈಡನ್ ಅವರೂ ಕೂಡ ತಾವು ಭಾರತದ ಪರ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಹೆಚ್ಚಾದ ಕೊರೊನಾ ಸೋಂಕಿತರು; ಎರಡನೇ ಅಲೆಯಲ್ಲಿ ಸೋಂಕಿತರ ಹೆಚ್ಚಳಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ