AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ

ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ
ಕೇರಳದ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್
TV9 Web
| Updated By: ಸುಷ್ಮಾ ಚಕ್ರೆ|

Updated on: Sep 06, 2021 | 5:26 PM

Share

ತಿರುವನಂತಪುರಂ: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಯಾವ ಪಂಚಾಯತ್​ಗಳ ಕಾಂಗ್ರೆಸ್ ಕಚೇರಿಗಳಲ್ಲೂ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸುವಂತಿಲ್ಲ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ. ಸುಧಾಕರನ್ ಆದೇಶ ನೀಡಿದ್ದಾರೆ. ಕೇರಳ ರಾಜ್ಯದ ಪಲಕ್ಕಾಡ್ ಜಿಲ್ಲೆಯ ಮಥೂರ್ ಗ್ರಾಮ ಪಂಚಾಯತ್​ನಿಂದ ಆರಂಭವಾಗಿರುವ ಈ ಸಂಪ್ರದಾಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಿಗೂ ಅನ್ವಯವಾಗಲಿದೆ.

ಈ ಮೊದಲು ಮಥೂರ್ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಸರ್ ಮತ್ತು ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿರುವ ಉಳಿದ ಪಂಚಾಯತ್​ಗಳಲ್ಲೂ ಇದನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಬದಲಾಗಿ ಪ್ರತಿಯೊಬ್ಬರನ್ನೂ ಅವರ ಹೆಸರಿನಿಂದಲೇ ಸಂಬೋಧಿಸಬೇಕು ಎಂಬ ನಿಯಮ ಜಾರಿಗೆ ತರಲಾಗಿದೆ. ಸರ್, ಮೇಡಂ ಎಂಬುದು ವಸಾಹತುಶಾಹಿಗಳು ಬಿಟ್ಟುಹೋದ ಪದಗಳಾಗಿದ್ದು, ಅದನ್ನು ಬಳಸದಿರಲು ಸೂಚಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್, ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

ಕೇರಳದ 14 ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಸರ್ ಮತ್ತು ಮೇಡಂ ಪದಗಳನ್ನು ಬಳಸದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಕೆಪಿಸಿಸಿ ಸೂಚನೆ ನೀಡಿದೆ. ಯುಡಿಎಫ್ ನೇತೃತ್ವದ ಮಥೂರ್ ಪಂಚಾಯತ್​ನಲ್ಲಿ ಮೊದಲ ಬಾರಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಮಥೂರ್ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಪಿ.ಆರ್. ಪ್ರಸಾದ್ ತಮ್ಮ ಅವಶ್ಯಕತೆಗಳಿಗೆ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವ ಜನ ಸಾಮಾನ್ಯರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್, ಮೇಡಂ ಎಂದು ಬಳಸದಂತೆ ಆದೇಶಿಸಿದ್ದರು.

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ; ಕಾಂಗ್ರೆಸ್​ ಒಳಜಗಳ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

(Use of Sir, Madam Will Be Banned in All Congress Ruled Panchayats in Kerala says KPCC President K Sudhakaran)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ