AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ

ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ
ಕೇರಳದ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್
TV9 Web
| Edited By: |

Updated on: Sep 06, 2021 | 5:26 PM

Share

ತಿರುವನಂತಪುರಂ: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಯಾವ ಪಂಚಾಯತ್​ಗಳ ಕಾಂಗ್ರೆಸ್ ಕಚೇರಿಗಳಲ್ಲೂ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸುವಂತಿಲ್ಲ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ. ಸುಧಾಕರನ್ ಆದೇಶ ನೀಡಿದ್ದಾರೆ. ಕೇರಳ ರಾಜ್ಯದ ಪಲಕ್ಕಾಡ್ ಜಿಲ್ಲೆಯ ಮಥೂರ್ ಗ್ರಾಮ ಪಂಚಾಯತ್​ನಿಂದ ಆರಂಭವಾಗಿರುವ ಈ ಸಂಪ್ರದಾಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಿಗೂ ಅನ್ವಯವಾಗಲಿದೆ.

ಈ ಮೊದಲು ಮಥೂರ್ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಸರ್ ಮತ್ತು ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿರುವ ಉಳಿದ ಪಂಚಾಯತ್​ಗಳಲ್ಲೂ ಇದನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಬದಲಾಗಿ ಪ್ರತಿಯೊಬ್ಬರನ್ನೂ ಅವರ ಹೆಸರಿನಿಂದಲೇ ಸಂಬೋಧಿಸಬೇಕು ಎಂಬ ನಿಯಮ ಜಾರಿಗೆ ತರಲಾಗಿದೆ. ಸರ್, ಮೇಡಂ ಎಂಬುದು ವಸಾಹತುಶಾಹಿಗಳು ಬಿಟ್ಟುಹೋದ ಪದಗಳಾಗಿದ್ದು, ಅದನ್ನು ಬಳಸದಿರಲು ಸೂಚಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್, ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

ಕೇರಳದ 14 ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಸರ್ ಮತ್ತು ಮೇಡಂ ಪದಗಳನ್ನು ಬಳಸದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಕೆಪಿಸಿಸಿ ಸೂಚನೆ ನೀಡಿದೆ. ಯುಡಿಎಫ್ ನೇತೃತ್ವದ ಮಥೂರ್ ಪಂಚಾಯತ್​ನಲ್ಲಿ ಮೊದಲ ಬಾರಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಮಥೂರ್ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಪಿ.ಆರ್. ಪ್ರಸಾದ್ ತಮ್ಮ ಅವಶ್ಯಕತೆಗಳಿಗೆ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವ ಜನ ಸಾಮಾನ್ಯರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್, ಮೇಡಂ ಎಂದು ಬಳಸದಂತೆ ಆದೇಶಿಸಿದ್ದರು.

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ; ಕಾಂಗ್ರೆಸ್​ ಒಳಜಗಳ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

(Use of Sir, Madam Will Be Banned in All Congress Ruled Panchayats in Kerala says KPCC President K Sudhakaran)

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ