AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anganwadi Scam: 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ನಮೂದಿಸಿದ ಅಂಗನವಾಡಿ ಕೇಂದ್ರ

ಹಣವನ್ನು ದುರುಪಯೋಗಪಡಿಸಿಕೊಳ್ಳಲು 40 ಅವಿವಾಹಿತ ಹೆಣ್ಣುಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ಎಂದು ಘೋಷಿಸಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ರಾಮಣ್ಣನ ಮಲ್ಹಿಯಾ ಗ್ರಾಮದ ಬಾಲಕಿಯರಿಗೆ ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೋಷಣ್ ಅಭಿಯಾನ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಆಘಾತಕಾರಿ ಸಂದೇಶ ಬಂದಿದೆ.

Anganwadi Scam: 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ನಮೂದಿಸಿದ ಅಂಗನವಾಡಿ ಕೇಂದ್ರ
ಗರ್ಭಿಣಿ
ನಯನಾ ರಾಜೀವ್
|

Updated on: Nov 08, 2024 | 12:05 PM

Share

ಹಣವನ್ನು ದುರುಪಯೋಗಪಡಿಸಿಕೊಳ್ಳಲು 40 ಅವಿವಾಹಿತ ಹೆಣ್ಣುಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ಎಂದು ನಮೂದಿಸಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.  ಮಲ್ಹಿಯಾ  ಗ್ರಾಮದ ಹೆಣ್ಣುಮಕ್ಕಳನ್ನು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೋಷಣ್ ಅಭಿಯಾನ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಆಘಾತಕಾರಿ ಸಂದೇಶ ಬಂದಿದೆ.

ಪೋಷಣ್ ಟ್ರ್ಯಾಕರ್​ಗೆ ಸುಸ್ವಾಗತ, ಹಾಲುಣಿಸುವ ತಾಯಂದಿರು ಬಿಸಿಯೂಟ ಅಥವಾ ಪಡಿತರ, ಸಮಾಲೋಚನೆ, ಮಕ್ಕಳ ಆರೋಗ್ಯ ಮೇಲ್ವಿಚಾರಣೆ ಮತ್ತು ಸ್ತನ್ಯಪಾನಕ್ಕೆ ಸಂಬಂಧಿಸಿದ ಸಲಹೆಯನ್ನು ಪಡೆಯಬಹುದು ಎನ್ನುವ ಸಂದೇಶ ಬಂದಿದ್ದು,ಅ ದನ್ನು ನೋಡಿ ಹೆಣ್ಣುಮಕ್ಕಳ ಮನೆಯವರು ಬೆಚ್ಚಿಬಿದ್ದಿದ್ದಾರೆ.

ಅವರು ಅಂಗನವಾಡಿ ಕಾರ್ಯಕರ್ತೆ ಸುಮನಲತಾ ಅವರನ್ನು ಪ್ರಶ್ನಿಸಿದಾಗ ನುಣುಚಿಕೊಳ್ಳಲು ಪ್ರಯತ್ನಿಸಿದರು. ಸುಮನಲತಾ ಅವರು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಆಧಾರ್ ನಕಲು ಪ್ರತಿಗಳನ್ನು ಸಂಗ್ರಹಿಸಿ, ನಂತರ ತಾಯಂದಿರಿಗೆ ಉದ್ದೇಶಿಸಿರುವ ಪೌಷ್ಟಿಕಾಂಶದ ವಸ್ತುಗಳನ್ನು ದುರುಪಯೋಗಪಡಿಸಿಕೊಳ್ಳಲು ಗರ್ಭಿಣಿ ಎಂದು ಸುಳ್ಳು ನೋಂದಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ

ಕುಟುಂಬದವರು ನೀಡಿದ ದೂರಿನ ಮೇರೆಗೆ ಮುಖ್ಯ ಅಭಿವೃದ್ಧಿ ಅಧಿಕಾರಿ ಹಿಮಾಂಶು ನಾಗ್ಪಾಲ್ ತನಿಖೆಗೆ ಆದೇಶಿಸಿದ್ದಾರೆ. ಈ ಹೆಣ್ಣುಮಕ್ಕಳ ಹೆಸರಿನಲ್ಲಿ ಯಾವುದೇ ವಸ್ತುಗಳನ್ನು ವಿತರಿಸಲಾಗಿದೆಯೇ ಎಂದು ಪರಿಶೀಲಿಸಲು ಬ್ಲಾಕ್ ಅಭಿವೃದ್ಧಿ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ತನಿಖೆಯ ಫಲಿತಾಂಶಗಳ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?