AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anganwadi Scam: 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ನಮೂದಿಸಿದ ಅಂಗನವಾಡಿ ಕೇಂದ್ರ

ಹಣವನ್ನು ದುರುಪಯೋಗಪಡಿಸಿಕೊಳ್ಳಲು 40 ಅವಿವಾಹಿತ ಹೆಣ್ಣುಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ಎಂದು ಘೋಷಿಸಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ರಾಮಣ್ಣನ ಮಲ್ಹಿಯಾ ಗ್ರಾಮದ ಬಾಲಕಿಯರಿಗೆ ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೋಷಣ್ ಅಭಿಯಾನ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಆಘಾತಕಾರಿ ಸಂದೇಶ ಬಂದಿದೆ.

Anganwadi Scam: 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ನಮೂದಿಸಿದ ಅಂಗನವಾಡಿ ಕೇಂದ್ರ
ಗರ್ಭಿಣಿ
ನಯನಾ ರಾಜೀವ್
|

Updated on: Nov 08, 2024 | 12:05 PM

Share

ಹಣವನ್ನು ದುರುಪಯೋಗಪಡಿಸಿಕೊಳ್ಳಲು 40 ಅವಿವಾಹಿತ ಹೆಣ್ಣುಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ಎಂದು ನಮೂದಿಸಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.  ಮಲ್ಹಿಯಾ  ಗ್ರಾಮದ ಹೆಣ್ಣುಮಕ್ಕಳನ್ನು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೋಷಣ್ ಅಭಿಯಾನ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಆಘಾತಕಾರಿ ಸಂದೇಶ ಬಂದಿದೆ.

ಪೋಷಣ್ ಟ್ರ್ಯಾಕರ್​ಗೆ ಸುಸ್ವಾಗತ, ಹಾಲುಣಿಸುವ ತಾಯಂದಿರು ಬಿಸಿಯೂಟ ಅಥವಾ ಪಡಿತರ, ಸಮಾಲೋಚನೆ, ಮಕ್ಕಳ ಆರೋಗ್ಯ ಮೇಲ್ವಿಚಾರಣೆ ಮತ್ತು ಸ್ತನ್ಯಪಾನಕ್ಕೆ ಸಂಬಂಧಿಸಿದ ಸಲಹೆಯನ್ನು ಪಡೆಯಬಹುದು ಎನ್ನುವ ಸಂದೇಶ ಬಂದಿದ್ದು,ಅ ದನ್ನು ನೋಡಿ ಹೆಣ್ಣುಮಕ್ಕಳ ಮನೆಯವರು ಬೆಚ್ಚಿಬಿದ್ದಿದ್ದಾರೆ.

ಅವರು ಅಂಗನವಾಡಿ ಕಾರ್ಯಕರ್ತೆ ಸುಮನಲತಾ ಅವರನ್ನು ಪ್ರಶ್ನಿಸಿದಾಗ ನುಣುಚಿಕೊಳ್ಳಲು ಪ್ರಯತ್ನಿಸಿದರು. ಸುಮನಲತಾ ಅವರು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಆಧಾರ್ ನಕಲು ಪ್ರತಿಗಳನ್ನು ಸಂಗ್ರಹಿಸಿ, ನಂತರ ತಾಯಂದಿರಿಗೆ ಉದ್ದೇಶಿಸಿರುವ ಪೌಷ್ಟಿಕಾಂಶದ ವಸ್ತುಗಳನ್ನು ದುರುಪಯೋಗಪಡಿಸಿಕೊಳ್ಳಲು ಗರ್ಭಿಣಿ ಎಂದು ಸುಳ್ಳು ನೋಂದಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ

ಕುಟುಂಬದವರು ನೀಡಿದ ದೂರಿನ ಮೇರೆಗೆ ಮುಖ್ಯ ಅಭಿವೃದ್ಧಿ ಅಧಿಕಾರಿ ಹಿಮಾಂಶು ನಾಗ್ಪಾಲ್ ತನಿಖೆಗೆ ಆದೇಶಿಸಿದ್ದಾರೆ. ಈ ಹೆಣ್ಣುಮಕ್ಕಳ ಹೆಸರಿನಲ್ಲಿ ಯಾವುದೇ ವಸ್ತುಗಳನ್ನು ವಿತರಿಸಲಾಗಿದೆಯೇ ಎಂದು ಪರಿಶೀಲಿಸಲು ಬ್ಲಾಕ್ ಅಭಿವೃದ್ಧಿ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ತನಿಖೆಯ ಫಲಿತಾಂಶಗಳ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!