AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!

ಉತ್ತರ ಪ್ರದೇಶದ ಕನ್ನೌಜ್ ಜಾತ್ರೆಯಲ್ಲಿ ಸ್ವಿಂಗ್ ರಾಡ್‌ನಲ್ಲಿ ಕೂದಲು ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ 13 ವರ್ಷದ ಹುಡುಗಿಯ ನೆತ್ತಿಯೇ ಕಿತ್ತುಹೋಗಿದೆ. ಈ ಭಯಾನಕ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ವಿಂಗ್ ನಿಲ್ಲುವ ವೇಳೆಗೆ ಸಂಪೂರ್ಣವಾಗಿ ನೆತ್ತಿ ಕಿತ್ತು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!
ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!
ಸುಷ್ಮಾ ಚಕ್ರೆ
|

Updated on: Nov 11, 2024 | 6:06 PM

Share

ನೊಯ್ಡಾ: ಉತ್ತರ ಪ್ರದೇಶದ ಕನೌಜ್‌ನ ಮಧೋನಗರ ಗ್ರಾಮದ ಜಾತ್ರೆಯೊಂದರಲ್ಲಿ ನಡೆದ ಭೀಕರ ಅಪಘಾತದಲ್ಲಿ 13 ವರ್ಷದ ಅನುರಾಧಾ ಕಥೇರಿಯಾ ಎಂಬ ಬಾಲಕಿಯ ಕೂದಲು ಸ್ವಿಂಗ್ ರೈಡ್‌ನ ಯಂತ್ರಕ್ಕೆ ಸಿಲುಕಿ ಗಂಭೀರವಾದ ಗಾಯಗಳಾಗಿದ್ದು, ಆಕೆಯ ನೆತ್ತಿ ಕಿತ್ತುಹೋಗಿದೆ. ಈ ಘಟನೆಯ ವಿಡಿಯೋದಲ್ಲಿ ರಾಡ್‌ನಿಂದ ಅವಳ ನೆತ್ತಿ ನೇತಾಡುತ್ತಿರುವುದನ್ನು ತೋರಿಸುತ್ತದೆ. ಆಕೆಯ ಸುತ್ತಲೂ ಇದ್ದವರು ಸ್ವಿಂಗ್ ಅನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ, ಅಷ್ಟರೊಳಗೆ ಆಕೆಯ ನೆತ್ತಿಯ ಕೂದಲು ಹಾಗೂ ಚರ್ಮವೂ ಕಿತ್ತುಬಂದಾಗಿತ್ತು.

ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಅನುರಾಧ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಕೆಯ ಕುಟುಂಬವು ಆರಂಭದಲ್ಲಿ ಅವಳನ್ನು ಗುರ್ಸಹೈಗಂಜ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸಾಗಿಸಿತು, ಆದರೆ ಆಕೆಯ ಸ್ಥಿತಿಯು ಹದಗೆಟ್ಟಿದ್ದರಿಂದ, ಅವಳನ್ನು ಪಿಜಿಐಗೆ ಕರೆದುಕೊಂಡು ಹೋಗಲಾಯಿತು. ವಿಶೇಷ ಚಿಕಿತ್ಸೆಗಾಗಿ ಲಕ್ನೋಗೆ ಸೇರಿಸಲಾಯಿತು. ಈಗಲೂ ಆಕೆ ಚಿಂತಾಜನಕ ಸ್ಥಿತಿಯಲ್ಲಿಯೇ ಉಳಿದಿದ್ದಾಳೆ.

ಇದನ್ನೂ ಓದಿ: Viral: ನಮಗೆ 7-8 ಮಕ್ಕಳು ಇದ್ದಾರೆ ಆದ್ರೆ ಯಾಕೆ ಸರ್ಕಾರ ನಮ್ಗೆ ಕೆಲಸ ಕೊಡ್ತಿಲ್ಲ ಎಂದ ಆಸಾಮಿ; ವಿಡಿಯೋ ವೈರಲ್‌

ಈ ಘಟನೆಯ ವಿಡಿಯೋ ಇಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ವಿಂಗ್ ನಿಲ್ಲುವ ವೇಳೆಗೆ ಸಂಪೂರ್ಣ ನೆತ್ತಿ ಕಿತ್ತು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಕನೌಜ್‌ನ ತಾಲ್ಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧೋನಗರ ಗ್ರಾಮದಲ್ಲಿ ಜಾತ್ರೆಯ ವೇಳೆ ಈ ಅವಘಡ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು