Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
Follow us
ನಯನಾ ರಾಜೀವ್
|

Updated on: Oct 24, 2023 | 1:02 PM

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ