AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
ನಯನಾ ರಾಜೀವ್
|

Updated on: Oct 24, 2023 | 1:02 PM

Share

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!