AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
ನಯನಾ ರಾಜೀವ್
|

Updated on: Oct 24, 2023 | 1:02 PM

Share

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್