AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
ನಯನಾ ರಾಜೀವ್
|

Updated on: Oct 24, 2023 | 1:02 PM

Share

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ