AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
ನಯನಾ ರಾಜೀವ್
|

Updated on: Oct 24, 2023 | 1:02 PM

Share

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ