AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಉತ್ತರ ಪ್ರದೇಶದ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿದ 15 ವರ್ಷದ ವಿದ್ಯಾರ್ಥಿ ಸಾವು; 61 ಜನ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮೆಹರೂನಾ ಗ್ರಾಮದ ಪಂಡಿತ್ ದೀನದಯಾಳ್ ಉಪಾಧ್ಯಾಯ ಆಶ್ರಮ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಶಾಲೆಯ ಊಟ ತಿಂದ ನಂತರ ಹೊಟ್ಟೆ ನೋವು, ವಾಂತಿ ಮತ್ತು ಭೇದಿ ಲಕ್ಷಣಗಳಿಂದ ಅಸ್ವಸ್ಥರಾಗಿದ್ದಾರೆ.

Crime News: ಉತ್ತರ ಪ್ರದೇಶದ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿದ 15 ವರ್ಷದ ವಿದ್ಯಾರ್ಥಿ ಸಾವು; 61 ಜನ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 07, 2024 | 6:20 PM

Share

ಡಿಯೋರಿಯಾ: 2 ದಿನಗಳ ಹಿಂದೆ ವಿಷಪೂರಿತವಾದ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಹಲವಾರು ಮಕ್ಕಳಲ್ಲಿ ಒಬ್ಬನಾದ 15 ವರ್ಷದ ವಿದ್ಯಾರ್ಥಿಯು ಪೂರ್ವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಬುಧವಾರ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೆಹರೂನಾ ಗ್ರಾಮದ ಪಂಡಿತ್ ದೀನದಯಾಳ್ ಉಪಾಧ್ಯಾಯ ಆಶ್ರಮ ಶಾಲೆಯ ಸರಿಸುಮಾರು 80 ವಿದ್ಯಾರ್ಥಿಗಳು ಶಾಲೆಯ ಊಟವನ್ನು ಸೇವಿಸಿದ ನಂತರ ಹೊಟ್ಟೆ ನೋವು, ವಾಂತಿ ಮತ್ತು ಭೇದಿ ಸೇರಿದಂತೆ ರೋಗಲಕ್ಷಣಗಳೊಂದಿಗೆ ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಧಿಕಾರಿಗಳ ಪ್ರಕಾರ, ಡಿಯೋರಿಯಾ ವೈದ್ಯಕೀಯ ಕಾಲೇಜಿನಲ್ಲಿ ಈವರೆಗೆ 61 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಆಧಾರಿತ ಶಿಕ್ಷಣವನ್ನು ನೀಡುವ ಆಶ್ರಮ ಶಾಲೆಗಳು ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲ್ಪಡುತ್ತವೆ. ಪ್ರಸ್ತುತ, ಈ ಪೈಕಿ 94 ಶಾಲೆಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕೃತ ವೆಬ್‌ಸೈಟ್ ತಿಳಿಸಿದೆ.

ಇದನ್ನೂ ಓದಿ: Nepal Helicopter Crash: ನೇಪಾಳದ ನುವಾಕೋಟ್‌ನಲ್ಲಿ ಹೆಲಿಕಾಪ್ಟರ್ ಪತನ; 5 ಜನ ಸಾವು

ಆಹಾರ ವಿಷಪೂರಿತ ಘಟನೆಯ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ದಿವ್ಯಾ ಮಿತ್ತಲ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಡಿಯೋರಿಯಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಇಂದಿನಿಂದ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಮಿತ್ತಲ್ ತಿಳಿಸಿದ್ದಾರೆ.

“ಗೋರಖ್‌ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಇಂದು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ. ಆಗಸ್ಟ್ 6ರಂದು ಮಧ್ಯಾಹ್ನ ರಕ್ತದೊತ್ತಡದಲ್ಲಿ ಹಠಾತ್ ಕುಸಿತದೊಂದಿಗೆ ಶಿವಂ ಅವರ ಆರೋಗ್ಯವು ಹದಗೆಟ್ಟಿತು. ಇದು ಅವರನ್ನು ಐಸಿಯುಗೆ ಸೇರಿಸಲು ಕಾರಣವಾಯಿತು ಎಂದು ಝಾ ಹೇಳಿದ್ದಾರೆ.

ಇದನ್ನೂ ಓದಿ: ವಿನೇಶ್ ಫೋಗಟ್ ಬೆನ್ನಿಗೆ ನಿಂತ ಪ್ರಧಾನಿ; ಭಾರತದ ಮುಂದಿರುವ ಆಯ್ಕೆಗಳ ಬಗ್ಗೆ ಪಿಟಿ ಉಷಾ ಜೊತೆ ಮೋದಿ ಚರ್ಚೆ

ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಶಿವಂ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಅವರ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸಲು, ಜಿಲ್ಲಾಡಳಿತವು ಹೆಚ್ಚುವರಿ ಸಿಎಂಒ ಡಾ. ಸುರೇಂದ್ರ ಚೌಧರಿ ಅವರನ್ನು ಬಿಆರ್‌ಡಿ ವೈದ್ಯಕೀಯ ಕಾಲೇಜಿಗೆ ಕಳುಹಿಸಿದೆ ಎಂದು ಸಿಎಂಒ ಉಲ್ಲೇಖಿಸಿದ್ದಾರೆ. 15 ವರ್ಷದ ಶಿವಂ ಯಾದವ್ ಬುಧವಾರ ನಿಧನರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!