ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಪ್ರದೇಶದಾದ್ಯಂತ ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ
ಉತ್ತರ ಪ್ರದೇಶದಲ್ಲಿ ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Oct 10, 2022 | 12:55 PM

ಲಕ್ನೋ: ಉತ್ತರ ಪ್ರದೇಶದಾದ್ಯಂತ (Uttar Pradesh Rain) ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ (Rainfall) 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಉತ್ತರ ಪ್ರದೇಶದ ಪೂರ್ವ, ಮಧ್ಯ ಭಾಗಗಳು, ಬುಂದೇಲ್‌ಖಂಡ್, ತೇರಾಯ್ ಬೆಲ್ಟ್ ಮತ್ತು ರೋಹಿಲ್‌ಖಂಡ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಲಕ್ನೋ, ನೊಯ್ಡಾ, ಗಾಜಿಯಾಬಾದ್, ಕಾನ್ಪುರ್, ರಾಂಪುರ ಮತ್ತು ಮೀರತ್‌ನಲ್ಲಿ ಜಿಲ್ಲಾಧಿಕಾರಿಗಳು ಇಂದು 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆಗ್ರಾ ಮತ್ತು ಅಲಿಗಢ ಆಡಳಿತಗಳು ಇಂದು ಮತ್ತು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಿವೆ. ಬಲ್ರಾಮ್‌ಪುರ ಜಿಲ್ಲೆಯ ಸುಮಾರು 400 ಹಳ್ಳಿಗಳು ಜಲಾವೃತವಾಗಿದ್ದು, ಗೋರಖ್‌ಪುರದ ಬರ್ಹಲ್‌ಗಂಜ್‌ನಲ್ಲಿ ದೋಣಿಯೊಂದು ಮುಳುಗಿದ ಪರಿಣಾಮ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಜನದಟ್ಟಣೆಯ ಸ್ಥಳಗಳು ಮತ್ತು ಶಿಥಿಲಗೊಂಡ ಕಟ್ಟಡಗಳತ್ತ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಮಳೆಗೆ ಸಂಬಂಧಿತ ಸಮಸ್ಯೆಗಳಿಗೆ ಸಿಲುಕಿರುವ ಜನರಿಗಾಗಿ ಹಲವಾರು ಜಿಲ್ಲೆಗಳಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲಕ್ನೋ, ಅಲಿಗಢ, ಮೀರತ್, ಗೌತಮ್ ಬುದ್ಧ ನಗರ ಮತ್ತು ಘಜಿಯಾಬಾದ್ ಸೇರಿದಂತೆ 12 ಜಿಲ್ಲೆಗಳ ಅಧಿಕಾರಿಗಳು ಇಂದು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಅಲಿಘಢದಲ್ಲಿ 12ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಅಕ್ಟೋಬರ್ 12ರವರೆಗೆ ಮುಚ್ಚಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೊಯ್ಡಾ, ಆಗ್ರಾ, ಮಥುರಾ, ಕಾನ್ಪುರ, ಇಟಾಹ್, ಮೈನ್‌ಪುರಿ ಮತ್ತು ಫಿರೋಜಾಬಾದ್‌ನ ಜಿಲ್ಲಾ ಅಧಿಕಾರಿಗಳು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ