AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಪ್ರದೇಶದಾದ್ಯಂತ ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ
ಉತ್ತರ ಪ್ರದೇಶದಲ್ಲಿ ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 10, 2022 | 12:55 PM

Share

ಲಕ್ನೋ: ಉತ್ತರ ಪ್ರದೇಶದಾದ್ಯಂತ (Uttar Pradesh Rain) ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ (Rainfall) 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಉತ್ತರ ಪ್ರದೇಶದ ಪೂರ್ವ, ಮಧ್ಯ ಭಾಗಗಳು, ಬುಂದೇಲ್‌ಖಂಡ್, ತೇರಾಯ್ ಬೆಲ್ಟ್ ಮತ್ತು ರೋಹಿಲ್‌ಖಂಡ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಲಕ್ನೋ, ನೊಯ್ಡಾ, ಗಾಜಿಯಾಬಾದ್, ಕಾನ್ಪುರ್, ರಾಂಪುರ ಮತ್ತು ಮೀರತ್‌ನಲ್ಲಿ ಜಿಲ್ಲಾಧಿಕಾರಿಗಳು ಇಂದು 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆಗ್ರಾ ಮತ್ತು ಅಲಿಗಢ ಆಡಳಿತಗಳು ಇಂದು ಮತ್ತು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಿವೆ. ಬಲ್ರಾಮ್‌ಪುರ ಜಿಲ್ಲೆಯ ಸುಮಾರು 400 ಹಳ್ಳಿಗಳು ಜಲಾವೃತವಾಗಿದ್ದು, ಗೋರಖ್‌ಪುರದ ಬರ್ಹಲ್‌ಗಂಜ್‌ನಲ್ಲಿ ದೋಣಿಯೊಂದು ಮುಳುಗಿದ ಪರಿಣಾಮ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಜನದಟ್ಟಣೆಯ ಸ್ಥಳಗಳು ಮತ್ತು ಶಿಥಿಲಗೊಂಡ ಕಟ್ಟಡಗಳತ್ತ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಮಳೆಗೆ ಸಂಬಂಧಿತ ಸಮಸ್ಯೆಗಳಿಗೆ ಸಿಲುಕಿರುವ ಜನರಿಗಾಗಿ ಹಲವಾರು ಜಿಲ್ಲೆಗಳಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲಕ್ನೋ, ಅಲಿಗಢ, ಮೀರತ್, ಗೌತಮ್ ಬುದ್ಧ ನಗರ ಮತ್ತು ಘಜಿಯಾಬಾದ್ ಸೇರಿದಂತೆ 12 ಜಿಲ್ಲೆಗಳ ಅಧಿಕಾರಿಗಳು ಇಂದು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಅಲಿಘಢದಲ್ಲಿ 12ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಅಕ್ಟೋಬರ್ 12ರವರೆಗೆ ಮುಚ್ಚಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೊಯ್ಡಾ, ಆಗ್ರಾ, ಮಥುರಾ, ಕಾನ್ಪುರ, ಇಟಾಹ್, ಮೈನ್‌ಪುರಿ ಮತ್ತು ಫಿರೋಜಾಬಾದ್‌ನ ಜಿಲ್ಲಾ ಅಧಿಕಾರಿಗಳು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?