AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ

ಪ್ರಾಥಮಿಕ ಮಾಹಿತಿಯಂತೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ
ಉತ್ತರ ಪ್ರದೇಶದಲ್ಲಿ ದೇವಾಲಯಕ್ಕೆ ಹಾನಿ, ಮೂರ್ತಿ ಧ್ವಂಸ
ರಶ್ಮಿ ಕಲ್ಲಕಟ್ಟ
|

Updated on:Jun 01, 2023 | 5:33 PM

Share

ಬುಲಂದ್‌ಶಹರ್: ಉತ್ತರ ಪ್ರದೇಶ(Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ಗುರುವಾರ ನಾಲ್ಕು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದು, ಇಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಕ್ರೋಶಗೊಂಡ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ದುಷ್ಕರ್ಮಿಗಳು ಹಿಂದೂ ದೇವತೆಗಳ 12 ವಿಗ್ರಹಗಳನ್ನು ವಿರೂಪಗೊಳಿಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಬುಧವಾರ ತಡರಾತ್ರಿ ಬರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುರುವಾರ ನಾಲ್ಕು ದೇವಸ್ಥಾನಗಳನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ದೇವಸ್ಥಾನದ ಆವರಣವನ್ನು ಸೀಲ್ ಮಾಡಿದರು.

ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದದ್ದು, ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಸ್ಥಳೀಯ ಹಿಂದೂ ಸಂಘಟನೆಗಳಿಗೆ ಭರವಸೆ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಇದನ್ನೂ ಓದಿ: Video Viral: ಮಹಾರಾಷ್ಟ್ರದಲ್ಲಿ ಕಳಪೆ ರಸ್ತೆ ಕಾಮಗಾರಿ, ಟಾರನ್ನು ಬರಿಗೈಯಲ್ಲಿ ಕಿತ್ತು ಹಾಕಿದ ಜನ

ದುಷ್ಕರ್ಮಿಗಳಿಂದ ದಾಳಿಗೊಳಗಾದ ದೇವಾಲಯಗಳಲ್ಲಿ ಒಂದು 100 ವರ್ಷಗಳಷ್ಟು ಹಳೆಯದು ಎಂದು ಭಾವಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಶಿವ ಮತ್ತು ಹನುಮಾನ್ ವಿಗ್ರಹಗಳಿಗೆ ಹಾನಿಯಾಗಿರುವುದನ್ನು ತೋರಿಸಲಾಗಿದೆ. ಘಟನೆಯನ್ನು ಎಸ್ಪಿ ಸುರೇಂದ್ರ ನಾಥ್ ತಿವಾರಿ ಖಚಿತಪಡಿಸಿದ್ದು, ಎಲ್ಲಾ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Thu, 1 June 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?