AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹಣಕ್ಕಾಗಿ ಚಿಕ್ಕಪ್ಪನಿಂದಲೇ ಬಾಲಕಿಯ ಅಪಹರಣ, ಹತ್ಯೆ, ಇಬ್ಬರ ಬಂಧನ

ಆಸ್ತಿಗಾಗಿ ಸ್ವಂತ ಚಿಕ್ಕಪ್ಪನೇ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ ತಂದೆಗೆ 6 ಲಕ್ಷ ರೂ. ಹೊಂದಿಸಲು ಸಾಧ್ಯವಾಗಿರಲಿಲ್ಲ, ಆ ಕೋಪದಲ್ಲೆ ಆಕೆಯನ್ನೇ ಹತ್ಯಗೈದಿದ್ದಾರೆ.

ಉತ್ತರ ಪ್ರದೇಶ: ಹಣಕ್ಕಾಗಿ ಚಿಕ್ಕಪ್ಪನಿಂದಲೇ ಬಾಲಕಿಯ ಅಪಹರಣ, ಹತ್ಯೆ, ಇಬ್ಬರ ಬಂಧನ
ಅಪಹರಣImage Credit source: iStock
ನಯನಾ ರಾಜೀವ್
|

Updated on: Mar 22, 2024 | 8:34 AM

Share

ಹಣಕ್ಕಾಗಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ಚಿಕ್ಕಪ್ಪನೇ ಅಪಹರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪ್ಪ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನು ವಿವಾದವಿದ್ದ ಕಾರಣ ಕೋಪದಲ್ಲಿ ಈ ಕೃತ್ಯವೆಸಗಿದ್ದಾನೆ. ಮಂಗಳವಾರ ಸಂಜೆ ಫರೈರಾ ಗ್ರಾಮದ ತನ್ನ ಮನೆಯಿಂದ ಅಪಹರಿಸಲಾಗಿತ್ತು.

ಅಪಹರಣಕಾರರು ಆಕೆಯನ್ನು ಸುರಕ್ಷಿತವಾಗಿ ಹಿಂದಿರುಗಿಸಲು 6 ಲಕ್ಷ ರೂ. ಕೇಳಿದ್ದರು. ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಅಪಹರಣದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಗುರುವಾರ ಫರೈರಾ ಗ್ರಾಮದ ಹೊರವಲಯದಲ್ಲಿರುವ ಸಾಸಿವೆ ತೋಟದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸರು ಅಪಹರಣ ಮತ್ತು ಕೊಲೆಯ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಅಪಹರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಪ್ಪ ಅಮಿತ್ ನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಅತುಲ್ ಶರ್ಮಾ ತಿಳಿಸಿದ್ದಾರೆ. ಅಮಿತ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಮತ್ತು ಅವನ ಸ್ನೇಹಿತ, ಪಕ್ಕದ ಹಳ್ಳಿಯ ನಿವಾಸಿ ನಿಖಿಲ್ ಅವನಿಗೆ ಸಹಾಯ ಮಾಡಿದ್ದಾನೆ ಎಂದು ಶರ್ಮಾ ಹೇಳಿದರು.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಿಖಿಲ್ ಅವರ ಜಮೀನಿನಲ್ಲಿ ಬಾಲಕಿಯ ಕೊಲೆ ನಡೆದಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ. ಆಕೆಯ ತಂದೆಯಿಂದ ಹಣ ಪಡೆಯಲು ಸಾಧ್ಯವಾಗದಿದ್ದಾಗ, ಅವನು ಬಾಲಕಿಯನ್ನು ಕೊಂದಿದ್ದಾನೆ. ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಸಂತ್ರಸ್ತ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ