AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹಣಕ್ಕಾಗಿ ಚಿಕ್ಕಪ್ಪನಿಂದಲೇ ಬಾಲಕಿಯ ಅಪಹರಣ, ಹತ್ಯೆ, ಇಬ್ಬರ ಬಂಧನ

ಆಸ್ತಿಗಾಗಿ ಸ್ವಂತ ಚಿಕ್ಕಪ್ಪನೇ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ ತಂದೆಗೆ 6 ಲಕ್ಷ ರೂ. ಹೊಂದಿಸಲು ಸಾಧ್ಯವಾಗಿರಲಿಲ್ಲ, ಆ ಕೋಪದಲ್ಲೆ ಆಕೆಯನ್ನೇ ಹತ್ಯಗೈದಿದ್ದಾರೆ.

ಉತ್ತರ ಪ್ರದೇಶ: ಹಣಕ್ಕಾಗಿ ಚಿಕ್ಕಪ್ಪನಿಂದಲೇ ಬಾಲಕಿಯ ಅಪಹರಣ, ಹತ್ಯೆ, ಇಬ್ಬರ ಬಂಧನ
ಅಪಹರಣImage Credit source: iStock
ನಯನಾ ರಾಜೀವ್
|

Updated on: Mar 22, 2024 | 8:34 AM

Share

ಹಣಕ್ಕಾಗಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ಚಿಕ್ಕಪ್ಪನೇ ಅಪಹರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪ್ಪ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನು ವಿವಾದವಿದ್ದ ಕಾರಣ ಕೋಪದಲ್ಲಿ ಈ ಕೃತ್ಯವೆಸಗಿದ್ದಾನೆ. ಮಂಗಳವಾರ ಸಂಜೆ ಫರೈರಾ ಗ್ರಾಮದ ತನ್ನ ಮನೆಯಿಂದ ಅಪಹರಿಸಲಾಗಿತ್ತು.

ಅಪಹರಣಕಾರರು ಆಕೆಯನ್ನು ಸುರಕ್ಷಿತವಾಗಿ ಹಿಂದಿರುಗಿಸಲು 6 ಲಕ್ಷ ರೂ. ಕೇಳಿದ್ದರು. ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಅಪಹರಣದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಗುರುವಾರ ಫರೈರಾ ಗ್ರಾಮದ ಹೊರವಲಯದಲ್ಲಿರುವ ಸಾಸಿವೆ ತೋಟದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸರು ಅಪಹರಣ ಮತ್ತು ಕೊಲೆಯ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಅಪಹರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಪ್ಪ ಅಮಿತ್ ನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಅತುಲ್ ಶರ್ಮಾ ತಿಳಿಸಿದ್ದಾರೆ. ಅಮಿತ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಮತ್ತು ಅವನ ಸ್ನೇಹಿತ, ಪಕ್ಕದ ಹಳ್ಳಿಯ ನಿವಾಸಿ ನಿಖಿಲ್ ಅವನಿಗೆ ಸಹಾಯ ಮಾಡಿದ್ದಾನೆ ಎಂದು ಶರ್ಮಾ ಹೇಳಿದರು.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಿಖಿಲ್ ಅವರ ಜಮೀನಿನಲ್ಲಿ ಬಾಲಕಿಯ ಕೊಲೆ ನಡೆದಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ. ಆಕೆಯ ತಂದೆಯಿಂದ ಹಣ ಪಡೆಯಲು ಸಾಧ್ಯವಾಗದಿದ್ದಾಗ, ಅವನು ಬಾಲಕಿಯನ್ನು ಕೊಂದಿದ್ದಾನೆ. ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಸಂತ್ರಸ್ತ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ