Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾಗೆ 56 ನೈವೇದ್ಯ ಅರ್ಪಣೆ

ರಾಮಲಲ್ಲಾ ಮಂದಿರ ನಿರ್ಮಾಣವಾಗುವಾಗ 56 ಬಗೆಯ ನೈವೇದ್ಯಗಳನ್ನು ಅರ್ಪಿಸುವುದು ನಮ್ಮ ಸಂಕಲ್ಪವಾಗಿತ್ತು. 4 ವರ್ಷಗಳಿಂದ ಈ ಕೆಲಸವನ್ನು ಮಾಡುತ್ತಿದ್ದೇವೆ, ಜನವರಿ 22 ರಂದು ರಾಮಲಲ್ಲಾಗಾಗಿ ಮತ್ತೆ 56 ಬಗೆಯ ನೈವೇದ್ಯವನ್ನು ತರಲಾಗುವುದು ಎಂದು ಮಧುರಿಮಾ ಸ್ವೀಟ್ ಅಂಗಡಿಯ ಮಾಲೀಕ ಸಜಲ್ ಗುಪ್ತಾ ಹೇಳಿದ್ದಾರೆ.

ಹೊಸ ವರ್ಷದಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾಗೆ 56 ನೈವೇದ್ಯ ಅರ್ಪಣೆ
ನೈವೇದ್ಯ
Follow us
ರಶ್ಮಿ ಕಲ್ಲಕಟ್ಟ
|

Updated on:Jan 01, 2024 | 3:21 PM

ಅಯೋಧ್ಯೆ ಜನವರಿ 01: ಹೊಸ ವರ್ಷದ 2024 ರ ಮೊದಲ ದಿನದಂದು, ಉತ್ತರ ಪ್ರದೇಶದ (Uttar Pradesh) ಪವಿತ್ರ ಪಟ್ಟಣವಾದ ಅಯೋಧ್ಯೆಯಲ್ಲಿ (Ayodhya) ‘ರಾಮ್ ಲಲ್ಲಾ’ಗೆ 56 ನೈವೇದ್ಯ ಅರ್ಪಿಸಲಾಗುವುದು. ರಾಮಮಂದಿರದ (Ram mandir) ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ’56 ಭೋಗ್ ಪ್ರಸಾದ’ವನ್ನು ದೇವರಿಗೆ ಅರ್ಪಿಸಲಿದ್ದಾರೆ. ಈ ನೈವೇದ್ಯವು ರಸಗುಲ್ಲಾ, ಲಡ್ಡು, ಬರ್ಫಿ ಹೀಗೆ ವಿವಿಧ ರೀತಿಯ ಸಿಹಿಭಕ್ಷ್ಯಗಳನ್ನು ಒಳಗೊಂಡಿದೆ. ಹೊಸ ವರ್ಷದ ಸಂದರ್ಭದಲ್ಲಿ ದೇವರಿಗೆ 56 ನೈವೇದ್ಯ ಅರ್ಪಿಸುವುದು ಹಳೆಯ ಸಂಪ್ರದಾಯವಾಗಿದೆ. ಲಕ್ನೋದ ಪ್ರಸಿದ್ಧ ಅಂಗಡಿಯಾದ ‘ಮಧುರಿಮಾ’ದಿಂದ ಪ್ರಸಾದಕ್ಕಾಗಿ ಸಿಹಿ ಆರ್ಡರ್ ಮಾಡಲಾಗಿದೆ.

ರಾಮಲಲ್ಲಾ ಮಂದಿರ ನಿರ್ಮಾಣವಾಗುವಾಗ 56 ಬಗೆಯ ನೈವೇದ್ಯಗಳನ್ನು ಅರ್ಪಿಸುವುದು ನಮ್ಮ ಸಂಕಲ್ಪವಾಗಿತ್ತು. 4 ವರ್ಷಗಳಿಂದ ಈ ಕೆಲಸವನ್ನು ಮಾಡುತ್ತಿದ್ದೇವೆ, ಜನವರಿ 22 ರಂದು ರಾಮಲಲ್ಲಾಗಾಗಿ ಮತ್ತೆ 56 ಬಗೆಯ ಭೋಗ್ ಪ್ರಸಾದವನ್ನು ತರಲಾಗುವುದು ಎಂದು ಮಧುರಿಮಾ ಸ್ವೀಟ್ ಅಂಗಡಿಯ ಮಾಲೀಕ ಸಜಲ್ ಗುಪ್ತಾ ಹೇಳಿದರು.

ಇದೇ ವೇಳೆ ವಿಶ್ವ ಹಿಂದೂ ಪರಿಷತ್ ಮುಖಂಡ ವಿನೋದ್ ಬನ್ಸಾಲ್ ಅವರು ರಾಮ ಮಂದಿರದ ಶಂಕುಸ್ಥಾಪನೆಗಾಗಿ ಯಾಗ ನಡೆಸಿದರು. ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಆಗಮಿಸಲಿದ್ದಾರೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯ ಹೆಸರಿನಲ್ಲಿ ವಂಚನೆ ಬಗ್ಗೆ ಎಚ್ಚರವಹಿಸಿ: ವಿಎಚ್​​ಪಿ

ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 16 ರಿಂದ ಏಳು ದಿನಗಳ ಕಾಲ ಪ್ರಾಣಪ್ರತಿಷ್ಠೆಗೆ ಕಾರ್ಯಕ್ರಮಗಳು ನಡೆಯಲಿದೆ.

ಜನವರಿ 22 ರಂದು ಮಧ್ಯಾಹ್ನ ಮತ್ತು 12.45 ರ ನಡುವೆ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಟ್ರಸ್ಟ್ ನಿರ್ಧರಿಸಿದೆ. ವೈದಿಕ ಅರ್ಚಕರಾದ ಲಕ್ಷ್ಮೀಕಾಂತ ದೀಕ್ಷಿತ್ ಅವರು ಆ ದಿನದಂದು ಪ್ರಾಣ ಪ್ರತಿಷ್ಠೆಯಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Mon, 1 January 24

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?