AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 6 ಸಾವು, 27 ಮಂದಿಗೆ ಗಾಯ

ಗೋರಖ್‌ಪುರ-ಕುಶಿನಗರ ಹೆದ್ದಾರಿಯ ಜಗದೀಶ್‌ಪುರ ಬಳಿ ವೇಗವಾಗಿ ಬಂದ ಟ್ರಕ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಪಂಕ್ಚರ್ ಆದ ಕಾರಣ ಬಸ್ ರಸ್ತೆಯಲ್ಲೇ ನಿಂತಿತ್ತು. ಈ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 5 ಆಂಬ್ಯುಲೆನ್ಸ್‌ಗಳಲ್ಲಿ ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ಮೇರೆಗೆ ಎಸ್ಪಿ ನಗರ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 6 ಸಾವು, 27 ಮಂದಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Nov 10, 2023 | 2:48 PM

Share

ಗೋರಖ್‌ಪುರ-ಕುಶಿನಗರ ಹೆದ್ದಾರಿಯ ಜಗದೀಶ್‌ಪುರ ಬಳಿ ವೇಗವಾಗಿ ಬಂದ ಟ್ರಕ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಂಕ್ಚರ್ ಆದ ಕಾರಣ ಬಸ್ ರಸ್ತೆಯಲ್ಲೇ ನಿಂತಿತ್ತು. ಈ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 5 ಆಂಬ್ಯುಲೆನ್ಸ್‌ಗಳಲ್ಲಿ ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ಮೇರೆಗೆ ಎಸ್ಪಿ ನಗರ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಬಸ್ ಗೋರಖ್‌ಪುರದಿಂದ ಪರೌನಾಗೆ ಹೋಗುತ್ತಿತ್ತು, ಬಸ್ ಪ್ರಯಾಣಿಕರೊಂದಿಗೆ ಪರೌನಾಗೆ ಹೋಗುತ್ತಿತ್ತು. ಜಗದೀಶ್‌ಪುರದ ಮಲ್ಲಾಪುರ ಬಳಿ ಬಸ್‌ನ ಟೈರ್ ಪಂಕ್ಚರ್ ಆಗಿತ್ತು.

ಚಾಲಕ ಮತ್ತು ಕಂಡಕ್ಟರ್ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿ ಬೇರೆ ಬಸ್​ಗೆ ಕರೆ ಮಾಡಿದ್ದರು. ಗೋರಖ್‌ಪುರದಿಂದ ಖಾಲಿ ಬಸ್‌ ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿತ್ತು. ಲವು ಪ್ರಯಾಣಿಕರು ಬಸ್ಸಿನಲ್ಲಿ ಕುಳಿತಿದ್ದರು. ಇನ್ನೂ ಕೆಲವರು ಎರಡು ಬಸ್ಸುಗಳ ನಡುವೆ ನಿಂತಿದ್ದರು. ಅಷ್ಟರಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಡಜನ್ ಜನರು ಗಾಯಗೊಂಡಿದ್ದಾರೆ. ಹತ್ತಾರು ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮತ್ತಷ್ಟು ಓದಿ:ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್​ನಲ್ಲಿ ಕಾರುಗಳ ಸರಣಿ ಅಪಘಾತ, 3 ಮಂದಿ ಸಾವು 7ಕ್ಕೂ ಅಧಿಕ ಮಂದಿಗೆ ಗಾಯ

ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ತಂಡಗಳನ್ನು ರಚಿಸಲಾಗಿದೆ ಮತ್ತು ಅವರು ತಪ್ಪಿತಸ್ಥ ಚಾಲಕನನ್ನು ಬಂಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು