AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಆನ್​​ಲೈನ್​​ನಲ್ಲಿ ಎಮ್ಮೆ ಆರ್ಡರ್ ಮಾಡಲು ಹೋಗಿ ಮೋಸದ ಜಾಲಕ್ಕೆ ಬಿದ್ದ ವ್ಯಾಪಾರಿ

ಸುನಿಲ್ ಕುಮಾರ್ ವಿಡಿಯೊದಲ್ಲಿ ಉಲ್ಲೇಖಿಸಲಾದ ದೂರವಾಣಿ ಸಂಖ್ಯೆಗೆ ಕಿಸಾನ್ ಭಯ್ಯಾ ಡೈರಿ ಫಾರ್ಮ್ ಅನ್ನು ಸಂಪರ್ಕಿಸಿದ್ದು ಜೈಪುರ ಮೂಲದ ಉದ್ಯಮಿ ಶುಭಂ ಅವರೊಂದಿಗೆ ಮಾತನಾಡಿದ್ದಾರೆ. ಅವರು ಎಮ್ಮೆ ಉತ್ತಮ ತಳಿಯದ್ದು, ಪ್ರತಿದಿನ 18 ಲೀಟರ್ ಹಾಲು ಕೊಡುತ್ತದೆ ಎಂದು ಭರವಸೆ ನೀಡಿದರು.

ಉತ್ತರ ಪ್ರದೇಶ: ಆನ್​​ಲೈನ್​​ನಲ್ಲಿ ಎಮ್ಮೆ ಆರ್ಡರ್ ಮಾಡಲು ಹೋಗಿ ಮೋಸದ ಜಾಲಕ್ಕೆ ಬಿದ್ದ ವ್ಯಾಪಾರಿ
ಸುನಿಲ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 01, 2024 | 8:14 PM

Share

ಲಕ್ನೋ ಫೆಬ್ರುವರಿ 01: ನಿಮ್ಮ ಆನ್‌ಲೈನ್ ಆರ್ಡರ್‌ಗಳು ಸಮಯಕ್ಕೆ ಸರಿಯಾಗಿ ಬರದಿದ್ದರೆ ಏನು ಮಾಡುತ್ತೀರಿ? ಅಂತಹ ಸನ್ನಿವೇಶದಲ್ಲಿ ಗ್ರಾಹಕರ ಸಹಾಯವಾಣಿಯನ್ನು ಸಂಪರ್ಕಿಸುವುದು ಬಹುಶಃ ಏಕೈಕ ಆಯ್ಕೆಯಾಗಿದೆ. ಆದರೆ ಉತ್ತರಪ್ರದೇಶದಲ್ಲಿ (Uttar Pradesh) ಎಮ್ಮೆ (Buffalo) ಖರೀದಿ ಮಾಡಲು ಆನ್ ಲೈನ್​​ನಲ್ಲಿ ಆರ್ಡರ್ ಮಾಡಿದ ಹಾಲಿನ ವ್ಯಾಪಾರಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಯ್ ಬರೇಲಿಯ (Rae Bareli) ಹೈನುಗಾರ ಸುನಿಲ್ ಕುಮಾರ್ ಯೂಟ್ಯೂಬ್ ನಲ್ಲಿ ಎಮ್ಮೆಯ ವಿಡಿಯೊ ನೋಡಿ ಆರ್ಡರ್ ಮಾಡಿದ್ದರು.

ವಿಡಿಯೊದಲ್ಲಿ ಉಲ್ಲೇಖಿಸಲಾದ ದೂರವಾಣಿ ಸಂಖ್ಯೆಗೆ ಕಿಸಾನ್ ಭಯ್ಯಾ ಡೈರಿ ಫಾರ್ಮ್ ಅನ್ನು ಸಂಪರ್ಕಿಸಿದ ಅವರು ಜೈಪುರ ಮೂಲದ ಉದ್ಯಮಿ ಶುಭಂ ಅವರೊಂದಿಗೆ ಮಾತನಾಡಿದ್ದಾರೆ. ಅವರು ಎಮ್ಮೆ ಉತ್ತಮ ತಳಿಯದ್ದು, ಪ್ರತಿದಿನ 18 ಲೀಟರ್ ಹಾಲು ಕೊಡುತ್ತದೆ ಎಂದು ಭರವಸೆ ನೀಡಿದರು.

ಶುಭಂ, ಕುಮಾರ್ ಅವರಿಗೆ ಎಮ್ಮೆಯ ವಿಡಿಯೊವನ್ನು ಕಳುಹಿಸಿದ್ದು, ಅದರ ಬೆಲೆ ₹ 55,000 ಎಂದು ತಿಳಿಸಿದ್ದಾರೆ. ಖರೀದಿಗೆ ಮುನ್ನ ₹ 10,000 ಮುಂಗಡ ಹಣ ನೀಡುವಂತೆ ಹೇಳಿದ್ದಾರೆ. ಎಮ್ಮೆ ಖರೀದಿಸಲು ನಿರ್ಧರಿಸಿದ ಹಾಲಿನ ವ್ಯಾಪಾರಿ ತಕ್ಷಣ ಹಣ ವರ್ಗಾಯಿಸಿದರು. ಮರುದಿನ ಎಮ್ಮೆ ತಲುಪಿಸುವುದಾಗಿ ಹೇಳಿದ್ದರು. ಆದರೆ ಅದು ಬರದೇ ಇದ್ದಾಗ ಕುಮಾರ್ ಮಾರಾಟಗಾರನಿಗೆ ಮತ್ತೊಮ್ಮೆ ಕರೆ ಮಾಡಿದ್ದಾರೆ. ಆಗ ₹ 25,000 ವರ್ಗಾಯಿಸಲು ಕೇಳಲಾಯಿತು.+

ಇದನ್ನೂ ಓದಿ:ಉತ್ತರ ಪ್ರದೇಶ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಅಯೋಧ್ಯೆ ರಾಮಮಂದಿರ, ಹೆಚ್ಚಲಿದೆ ಆದಾಯ

“ಆದರೆ ನಾನು ಯಾವುದೇ ಹೆಚ್ಚಿನ ಹಣ ಪಾವತಿಯನ್ನು ಮಾಡಲಿಲ್ಲ. ನಾನು ವಂಚನೆಗೆ ಬಲಿಯಾಗಿದ್ದೇನೆ ಎಂದು ಗೊತ್ತಾಯ್ತು. ಅವರು ಈಗ ನನ್ನ ಸಂಖ್ಯೆಯನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದಾರೆ” ಎಂದು ಹಾಲಿನ ವ್ಯಾಪಾರಿ ಸುದ್ದಿಗಾರರಿಗೆ ತಿಳಿಸಿದರು. ಈ ಸಂಬಂಧ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ