AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದ ವೃದ್ಧನಿಗೆ ಥಳಿಸಿದ ಯುವತಿ, ವಿಡಿಯೋ ವೈರಲ್​

ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದಕ್ಕೆ 22 ವರ್ಷದ ಯುವತಿ 79 ವರ್ಷದ ವೃದ್ಧನಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿರುವ ಪಂಚಶೀಲದಲ್ಲಿ ನಡೆದಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Aug 03, 2023 | 10:21 AM

Share

ಉತ್ತರ ಪ್ರದೇಶ, ಆ.1: ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದಕ್ಕೆ 22 ವರ್ಷದ ಯುವತಿ 79 ವರ್ಷದ ವೃದ್ಧನಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶ(Uttar Pradesh) ಗಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿರುವ ಪಂಚಶೀಲದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು ಯುವತಿ ವೃದ್ಧನಿಗೆ ಕೋಲಿನಿಂದ ಹಲವು ಬಾರಿ ಥಳಿಸಿದ್ದಾಳೆ. ಈ ವಿಡಿಯೋ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಯುವತಿಯನ್ನು ಬಂಧನ ಮಾಡಲಾಗಿದೆ.

ಪೊಲೀಸರ ವರದಿ ಪ್ರಕಾರ ಯುವತಿಯನ್ನು ಸಿಮ್ರಾನ್​​ ಎಂದು ಗುರುತಿಸಲಾಗಿದೆ. ಇನ್ನು ಹಲ್ಲೆಗೊಳಗಾದ ವ್ಯಕ್ತಿಯನ್ನು ರೂಪನಾರಾಯಣ ಮೆಹ್ರಾ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿ ವೇವ್​ ಸಿಟಿಯ ಸಹಾಯಕ ಪೊಲೀಸ್ ಆಯುಕ್ತ ಸಲೋನಿ ಅರ್ಗವಲ್​​, ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ,  ನಾಯಿಗಳು ಈ ಪ್ರದೇಶದಲ್ಲಿ ಹೆಚ್ಚಾಗಿದ್ದು, ಹಲವು ಬಾರಿ ಜನರ ಮೇಲೆ ದಾಳಿ ಮಾಡಿದೆ. ಮಕ್ಕಳು, ವೃದ್ಧರು ಇಲ್ಲಿ ಓಡಾಡುತ್ತಾರೆ ಎಂದು ಊಟ ಹಾಕಲು ವಿರೋಧಿಸಿದ ರೂಪನಾರಾಯಣ ಮೆಹ್ರಾ ಅವರಿಗೆ ಯುವತಿ ಥಳಿಸಿದ್ದಾಳೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿ ಜತೆಗೆ ದೇವಾಸ್ಥಾನದಲ್ಲಿ ಕಾಣಿಸಿಕೊಂಡ ಅನ್ಯಕೋಮಿನ ಯುವಕ, ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ವೃದ್ಧ ನೀಡಿದ ದೂರಿನ ಆಧಾರದ ಮೇಲೆ ಮತ್ತು ವಿಡಿಯೋ ಸಾಕ್ಷಿಯನ್ನು ಪರಿಗಣಿಸಿ ಯುವತಿಯ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕಳೆದೆರಡು ತಿಂಗಳುಗಳಲ್ಲಿ ಹಲವಾರು ನಾಯಿಗಳು ದಾಳಿ ಮಾಡಿರುವ ಘಟನೆಗಳು ನಡೆದಿವೆ, ಇದು ಹಲವಾರು ಜನರನ್ನು ಬಲಿ ತೆಗೆದುಕೊಂಡಿದೆ.

ಜೂನ್‌ನಲ್ಲಿ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿ ಏಳು ವರ್ಷದ ಬಾಲಕನೊಬ್ಬನ ಮೇಲೆ ಪಿಟ್‌ಬುಲ್‌ ನಾಯಿ ದಾಳಿ ಮಾಡಿತ್ತು. ಇದರಿಂದ ಅವನ ಕಿವಿಯನ್ನು ಕಚ್ಚಿತು ಮತ್ತು ಅವನ ಹಿಂಭಾಗದ ಪ್ರದೇಶದಲ್ಲಿ ಗಂಭೀರವಾದ ಗಾಯಗಳನ್ನು ಮಾಡಿತು. ಘಟನೆಯ ನಂತರ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದರು. ಈ ಕಾರಣಕ್ಕೆ ಇಲ್ಲಿ ಊಟ ಹಾಕಬೇಡಿ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Thu, 3 August 23

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ