AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದ ವೃದ್ಧನಿಗೆ ಥಳಿಸಿದ ಯುವತಿ, ವಿಡಿಯೋ ವೈರಲ್​

ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದಕ್ಕೆ 22 ವರ್ಷದ ಯುವತಿ 79 ವರ್ಷದ ವೃದ್ಧನಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿರುವ ಪಂಚಶೀಲದಲ್ಲಿ ನಡೆದಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Aug 03, 2023 | 10:21 AM

Share

ಉತ್ತರ ಪ್ರದೇಶ, ಆ.1: ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ ಎಂದು ವಿರೋಧಿಸಿದಕ್ಕೆ 22 ವರ್ಷದ ಯುವತಿ 79 ವರ್ಷದ ವೃದ್ಧನಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶ(Uttar Pradesh) ಗಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿರುವ ಪಂಚಶೀಲದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು ಯುವತಿ ವೃದ್ಧನಿಗೆ ಕೋಲಿನಿಂದ ಹಲವು ಬಾರಿ ಥಳಿಸಿದ್ದಾಳೆ. ಈ ವಿಡಿಯೋ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಯುವತಿಯನ್ನು ಬಂಧನ ಮಾಡಲಾಗಿದೆ.

ಪೊಲೀಸರ ವರದಿ ಪ್ರಕಾರ ಯುವತಿಯನ್ನು ಸಿಮ್ರಾನ್​​ ಎಂದು ಗುರುತಿಸಲಾಗಿದೆ. ಇನ್ನು ಹಲ್ಲೆಗೊಳಗಾದ ವ್ಯಕ್ತಿಯನ್ನು ರೂಪನಾರಾಯಣ ಮೆಹ್ರಾ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿ ವೇವ್​ ಸಿಟಿಯ ಸಹಾಯಕ ಪೊಲೀಸ್ ಆಯುಕ್ತ ಸಲೋನಿ ಅರ್ಗವಲ್​​, ಬೀದಿ ನಾಯಿಗೆ ಇಲ್ಲಿ ಊಟ ಹಾಕಬೇಡಿ,  ನಾಯಿಗಳು ಈ ಪ್ರದೇಶದಲ್ಲಿ ಹೆಚ್ಚಾಗಿದ್ದು, ಹಲವು ಬಾರಿ ಜನರ ಮೇಲೆ ದಾಳಿ ಮಾಡಿದೆ. ಮಕ್ಕಳು, ವೃದ್ಧರು ಇಲ್ಲಿ ಓಡಾಡುತ್ತಾರೆ ಎಂದು ಊಟ ಹಾಕಲು ವಿರೋಧಿಸಿದ ರೂಪನಾರಾಯಣ ಮೆಹ್ರಾ ಅವರಿಗೆ ಯುವತಿ ಥಳಿಸಿದ್ದಾಳೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿ ಜತೆಗೆ ದೇವಾಸ್ಥಾನದಲ್ಲಿ ಕಾಣಿಸಿಕೊಂಡ ಅನ್ಯಕೋಮಿನ ಯುವಕ, ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ವೃದ್ಧ ನೀಡಿದ ದೂರಿನ ಆಧಾರದ ಮೇಲೆ ಮತ್ತು ವಿಡಿಯೋ ಸಾಕ್ಷಿಯನ್ನು ಪರಿಗಣಿಸಿ ಯುವತಿಯ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕಳೆದೆರಡು ತಿಂಗಳುಗಳಲ್ಲಿ ಹಲವಾರು ನಾಯಿಗಳು ದಾಳಿ ಮಾಡಿರುವ ಘಟನೆಗಳು ನಡೆದಿವೆ, ಇದು ಹಲವಾರು ಜನರನ್ನು ಬಲಿ ತೆಗೆದುಕೊಂಡಿದೆ.

ಜೂನ್‌ನಲ್ಲಿ ಕ್ರಾಸಿಂಗ್ಸ್ ರಿಪಬ್ಲಿಕ್ ಟೌನ್‌ಶಿಪ್‌ನಲ್ಲಿ ಏಳು ವರ್ಷದ ಬಾಲಕನೊಬ್ಬನ ಮೇಲೆ ಪಿಟ್‌ಬುಲ್‌ ನಾಯಿ ದಾಳಿ ಮಾಡಿತ್ತು. ಇದರಿಂದ ಅವನ ಕಿವಿಯನ್ನು ಕಚ್ಚಿತು ಮತ್ತು ಅವನ ಹಿಂಭಾಗದ ಪ್ರದೇಶದಲ್ಲಿ ಗಂಭೀರವಾದ ಗಾಯಗಳನ್ನು ಮಾಡಿತು. ಘಟನೆಯ ನಂತರ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದರು. ಈ ಕಾರಣಕ್ಕೆ ಇಲ್ಲಿ ಊಟ ಹಾಕಬೇಡಿ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Thu, 3 August 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?