AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 5 ತಿಂಗಳ ಮಗು ಸೇರಿ ಐವರು ಸಾವು

ಡಬಲ್ ಡೆಕ್ಕರ್​ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲಿಗಢದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ಬಸ್ ಛಿದ್ರಗೊಂಡಿದ್ದು, ಮೃತದೇಹಗಳು ಮತ್ತು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 5 ತಿಂಗಳ ಮಗು ಸೇರಿ ಐವರು ಸಾವು
ಬಸ್ ಅಪಘಾತImage Credit source: IndiaToday
ನಯನಾ ರಾಜೀವ್
|

Updated on: Nov 21, 2024 | 7:50 AM

Share

ಡಬಲ್ ಡೆಕ್ಕರ್​ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲಿಗಢದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ಬಸ್ ಛಿದ್ರಗೊಂಡಿದ್ದು, ಮೃತದೇಹಗಳು ಮತ್ತು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.

11 ತಿಂಗಳ ಹೆಣ್ಣು ಮಗು, 5 ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ. ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ. ಮೂರು ಶವಗಳನ್ನು ಗುರುತಿಸಲಾಗಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ. ಬಸ್ ಫೈಜಾಬಾದ್ ಮೂಲದ ಕೃಷ್ಣ ಟ್ರಾವೆಲ್ಸ್ ಕಂಪನಿಗೆ ಸೇರಿದೆ. ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ಡೆಹ್ರಾಡೂನ್‌ನಲ್ಲಿ ಮದ್ಯಪಾನ ಮಾಡಿದ ಯುವಕರ ಕಾರು ಡಿಕ್ಕಿ; 6 ವಿದ್ಯಾರ್ಥಿಗಳ ಸಾವು

ಮತ್ತೊಂದು ಘಟನೆ

ದಟ್ಟ ಮಂಜಿನಿಂದಾಗಿ ಅಪಘಾತ ಉತ್ತರ ಪ್ರದೇಶದ ಕಾನ್ಪುರದ ಘಟಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡಿಮೆ ಗೋಚರತೆಯಿಂದಾಗಿ ಬಸ್ ಟ್ರಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕ ಮೋಹಿತ್ ಯಾದವ್ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ