AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ

ಇಟಾವಾದಲ್ಲಿ ಕಾರು ಹಾಗೂ ಬಸ್​ ನಡುವೆ ಡಿಕ್ಕಿ ಉಂಟಾಗಿ 7 ಮಂದಿ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ
ಬಸ್Image Credit source: Moneycontrol.com
ನಯನಾ ರಾಜೀವ್
|

Updated on: Aug 04, 2024 | 8:29 AM

Share

ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿದ್ದಾರೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಎಸ್‌ಎಸ್‌ಪಿ ಇಟಾವಾ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20-25 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ ಎಂದು ವರದಿಗಳು ತಿಳಿಸಿವೆ.

ಆಗ ಕಾರು ಡಬ್ಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದು ಅದನ್ನು ನಿಯಂತ್ರಿಸಲಾಗದೆ; ಬಸ್ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ