AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ

ಇಟಾವಾದಲ್ಲಿ ಕಾರು ಹಾಗೂ ಬಸ್​ ನಡುವೆ ಡಿಕ್ಕಿ ಉಂಟಾಗಿ 7 ಮಂದಿ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ
ಬಸ್Image Credit source: Moneycontrol.com
Follow us
ನಯನಾ ರಾಜೀವ್
|

Updated on: Aug 04, 2024 | 8:29 AM

ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿದ್ದಾರೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಎಸ್‌ಎಸ್‌ಪಿ ಇಟಾವಾ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20-25 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ ಎಂದು ವರದಿಗಳು ತಿಳಿಸಿವೆ.

ಆಗ ಕಾರು ಡಬ್ಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದು ಅದನ್ನು ನಿಯಂತ್ರಿಸಲಾಗದೆ; ಬಸ್ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!