AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಪ್ರಾಣಿಗಳನ್ನು ರಕ್ಷಿಸಲು ಹೋಗಿ, ಕಂದಕಕ್ಕೆ ಬಿದ್ದ ಕಾರು, 7 ಮಂದಿ ದುರ್ಮರಣ

ಉತ್ತರ ಪ್ರದೇಶದ ಶ್ರಾಸವ್ತಿಯಲ್ಲಿ ಕಾರೊಂದು ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಪ್ರಾಣಿಗಳನ್ನು ರಕ್ಷಿಸಲು ಹೋಗಿ, ಕಂದಕಕ್ಕೆ ಬಿದ್ದ ಕಾರು, 7 ಮಂದಿ ದುರ್ಮರಣ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Aug 06, 2023 | 8:54 AM

Share

ಉತ್ತರ ಪ್ರದೇಶದ ಶ್ರಾಸವ್ತಿಯಲ್ಲಿ ಕಾರೊಂದು ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ, ಬಲರಾಮ್​ಪುರದಿಂದ ಬಹ್ರೈಚ್​ಗೆ ಹೋಗುತ್ತಿದ್ದ ಬೊಲೆರೊ ಕಾರು ಬೌದ್ಧ ಸರ್ಕ್ಯೂಟ್​ನ ಇಕೌನಾ ಪೊಲೀಸ್ ಠಾಣೆಯ ಭಗವಾನ್​ಪುರ ಗ್ರಾಮದ ಘಟನೆ ನಡೆದಿದೆ.

ನಂತರ ಪಲ್ಟಿಯಾಗಿ ಕಂದಕಕ್ಕೆ ಹೋಗಿ ಬಿದ್ದಿದೆ, ಅಲ್ಲೇ ಇದ್ದ ಹಳ್ಳದಲ್ಲಿ ಮುಳುಗಿ 7 ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿಗಳಾಗಿದ್ದರು. ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿ ಸಂತೋಷ್ ಕುಮಾರ್ ಗುಪ್ತಾ ಅವರ ಪುತ್ರ ನೀಲಾಂಶ್ ಹಾಗೂ ವೈಭವ್, ಪತ್ನಿ ನಿತಿಯೊಂದಿಗೆ ನೇಪಾಲ್​ಗಂಜ್​ನಲ್ಲಿರುವ ಅತ್ತೆಯ ಮನೆಗೆ ಹೋಗಿದ್ದರು.

ಅಪಘಾತದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಒಳಗೆ ಕುಳಿತಿದ್ದವರೂ ಬಹಳ ಹೊತ್ತಿನವರೆಗೆ ಕಾರಿನಲ್ಲೇ ಸಿಲುಕಿಕೊಂಡಿದ್ದರು. ಕಾರನ್ನು ಕತ್ತರಿಸಿ ಹಲವು ಶವಗಳನ್ನು ಹೊರ ತೆಗೆಯಲಾಗಿದೆ. ಮತ್ತೊಂದೆಡೆ, ಯುಪಿಯ ಫರೂಕಾಬಾದ್‌ನಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಖಾಸಗಿ ಬಸ್ ನವಾಬ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಕನಿಷ್ಠ 50 ಪ್ರಯಾಣಿಕರಿದ್ದರು.

ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಸುದ್ದಿಯೂ ಇದೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಫರೂಕಾಬಾದ್‌ನಿಂದ ದೆಹಲಿಗೆ ಚಲಿಸುವ ಅಭಯ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್