AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಪ್ರಾಣಿಗಳನ್ನು ರಕ್ಷಿಸಲು ಹೋಗಿ, ಕಂದಕಕ್ಕೆ ಬಿದ್ದ ಕಾರು, 7 ಮಂದಿ ದುರ್ಮರಣ

ಉತ್ತರ ಪ್ರದೇಶದ ಶ್ರಾಸವ್ತಿಯಲ್ಲಿ ಕಾರೊಂದು ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಪ್ರಾಣಿಗಳನ್ನು ರಕ್ಷಿಸಲು ಹೋಗಿ, ಕಂದಕಕ್ಕೆ ಬಿದ್ದ ಕಾರು, 7 ಮಂದಿ ದುರ್ಮರಣ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Aug 06, 2023 | 8:54 AM

Share

ಉತ್ತರ ಪ್ರದೇಶದ ಶ್ರಾಸವ್ತಿಯಲ್ಲಿ ಕಾರೊಂದು ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ, ಬಲರಾಮ್​ಪುರದಿಂದ ಬಹ್ರೈಚ್​ಗೆ ಹೋಗುತ್ತಿದ್ದ ಬೊಲೆರೊ ಕಾರು ಬೌದ್ಧ ಸರ್ಕ್ಯೂಟ್​ನ ಇಕೌನಾ ಪೊಲೀಸ್ ಠಾಣೆಯ ಭಗವಾನ್​ಪುರ ಗ್ರಾಮದ ಘಟನೆ ನಡೆದಿದೆ.

ನಂತರ ಪಲ್ಟಿಯಾಗಿ ಕಂದಕಕ್ಕೆ ಹೋಗಿ ಬಿದ್ದಿದೆ, ಅಲ್ಲೇ ಇದ್ದ ಹಳ್ಳದಲ್ಲಿ ಮುಳುಗಿ 7 ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿಗಳಾಗಿದ್ದರು. ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿ ಸಂತೋಷ್ ಕುಮಾರ್ ಗುಪ್ತಾ ಅವರ ಪುತ್ರ ನೀಲಾಂಶ್ ಹಾಗೂ ವೈಭವ್, ಪತ್ನಿ ನಿತಿಯೊಂದಿಗೆ ನೇಪಾಲ್​ಗಂಜ್​ನಲ್ಲಿರುವ ಅತ್ತೆಯ ಮನೆಗೆ ಹೋಗಿದ್ದರು.

ಅಪಘಾತದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಒಳಗೆ ಕುಳಿತಿದ್ದವರೂ ಬಹಳ ಹೊತ್ತಿನವರೆಗೆ ಕಾರಿನಲ್ಲೇ ಸಿಲುಕಿಕೊಂಡಿದ್ದರು. ಕಾರನ್ನು ಕತ್ತರಿಸಿ ಹಲವು ಶವಗಳನ್ನು ಹೊರ ತೆಗೆಯಲಾಗಿದೆ. ಮತ್ತೊಂದೆಡೆ, ಯುಪಿಯ ಫರೂಕಾಬಾದ್‌ನಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಖಾಸಗಿ ಬಸ್ ನವಾಬ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಕನಿಷ್ಠ 50 ಪ್ರಯಾಣಿಕರಿದ್ದರು.

ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಸುದ್ದಿಯೂ ಇದೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಫರೂಕಾಬಾದ್‌ನಿಂದ ದೆಹಲಿಗೆ ಚಲಿಸುವ ಅಭಯ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ