AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಶಂಕಿತ ರೋಗಿಗಳಿಗೆ ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಿದೆ ಉತ್ತರ ಪ್ರದೇಶ ಸರ್ಕಾರ

Uttar Pradesh: ಆರ್​ಟಿಪಿಸಿಆರ್ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ನೆಗೆಟಿವ್ ಎಂದು ತೋರಿಸಿದ್ದರೂ ಎಕ್ಸ್ ರೇ, ಸಿಟಿ ಸ್ಕ್ಯಾನ್, ರಕ್ತದ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡರೆ ಅಥವಾ ವೈದ್ಯರು ಆ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರೆ ಆ ವ್ಯಕ್ತಿಯನ್ನು ಸಂಭಾವ್ಯ ಕೊವಿಡ್ ರೋಗಿ ಎಂದು ವರ್ಗೀಕರಿಸಿ ಚಿಕಿತ್ಸೆ ನೀಡಲಾಗುವುದು.

ಕೊರೊನಾ ಶಂಕಿತ ರೋಗಿಗಳಿಗೆ ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಿದೆ ಉತ್ತರ ಪ್ರದೇಶ ಸರ್ಕಾರ
ಕೊವಿಡ್ ವಾರ್ಡ್ ಪರಿಶೀಲನೆ ನಡೆಸುತ್ತಿರುವ ಯೋಗಿ ಆದಿತ್ಯನಾಥ
ರಶ್ಮಿ ಕಲ್ಲಕಟ್ಟ
|

Updated on: Apr 18, 2021 | 11:59 AM

Share

ಲಕ್ನೊ: ಆರ್​ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಇದ್ದು, ಕೊವಿಡ್ ರೋಗ ಲಕ್ಷಣಗಳು ಕಾಣಿಸಿಕೊಂಡ ವ್ಯಕ್ತಿಗಳನ್ನು ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುವುದು ಎಂದು ಉತ್ತರಪ್ರದೇಶದ ಸರ್ಕಾರ ಹೇಳಿದೆ. ವ್ಯಕ್ತಿಯೊಬ್ಬರು ಆರ್​ಟಿಪಿಸಿಆರ್ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ನೆಗೆಟಿವ್ ಎಂದು ತೋರಿಸಿದ್ದರೂ ಎಕ್ಸ್ ರೇ, ಸಿಟಿ ಸ್ಕ್ಯಾನ್, ರಕ್ತದ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡರೆ ಅಥವಾ ವೈದ್ಯರು ಆ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರೆ ಆ ವ್ಯಕ್ತಿಯನ್ನು ಸಂಭಾವ್ಯ ಕೊವಿಡ್ ರೋಗಿ ಎಂದು ವರ್ಗೀಕರಿಸಿ ಚಿಕಿತ್ಸೆ ನೀಡಲಾಗುವುದು ಎಂದು ಶನಿವಾರ ಸರ್ಕಾರ ಪ್ರಕಟಣೆ ಹೊರಡಿಸಿದೆ. ಈ ವರ್ಗದಡಿಯಲ್ಲಿರುವ ಶಂಕಿತ ಕೊವಿಡ್ ರೋಗಿಗೆ ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಹೇಳಿದೆ.

ಸಿಎಂ ಸೂಚನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ‘ಟೀಂ 11’ ಅಧಿಕಾರಿಗಳೊಂದಿಗೆ  ವಿಡಿಯೊ ಸಂವಾದ ನಡೆಸಿದ ನಂತರ ಲಾಕ್​ಡೌನ್ ಮತ್ತು ಕರ್ಫ್ಯೂ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲಾಕ್​ಡೌನ್ ಸಮಯದಲ್ಲಿ, ವೈದ್ಯಕೀಯ ಮತ್ತು ಆರೋಗ್ಯ ಸಂಬಂಧಿತ ಸೇವೆಗಳು ಮತ್ತು ಅಗತ್ಯ ವಸ್ತುಗಳ ಪೂರೈಕೆ ಮುಂದುವರಿಯುತ್ತದೆ. ವಾರಾಂತ್ಯದಲ್ಲಿ ಸ್ಯಾನಿಟೈಜೇಷನ್ ಮಾಡಲು ಬೃಹತ್ ಅಭಿಯಾನವನ್ನು ಕೈಗೊಳ್ಳಲಾಗುವುದು. ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಬೆಂಬಲದೊಂದಿಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹತ್ತು ಹೊಸ ಆಮ್ಲಜನಕ ಘಟಕಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆದಿತ್ಯನಾಥ ಹೇಳಿದ್ದಾರೆ

ಉತ್ತರ ಪ್ರದೇಶದಲ್ಲಿ 500 ಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು ಎಲ್ಲಾ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಅದೇ ವೇಳೆ ಏಪ್ರಿಲ್ 30 ರವರೆಗೆ ರಾಜ್ಯದಲ್ಲಿ 1 ಮತ್ತು 12 ನೇ ತರಗತಿಯ ಶಾಲೆಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದೆ.

ಕೊವಿಡ್ ಪ್ರಕರಣ ಹೆಚ್ಚಳ ಶನಿವಾರ ಉತ್ತರ ಪ್ರದೇಶಲ್ಲಿ 120 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 9,703 ಕ್ಕೆ ತಲುಪಿದೆ. 27,357 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿದ್ದು ಕೊವಿಡ್ ರೋಗಿಗಳ ಸಂಖ್ಯೆ 8,21,054 ಕ್ಕೆ ಏರಿದೆ. ರಾಜ್ಯದ ರಾಜಧಾನಿಯಲ್ಲಿ 36, ಕಾನ್ಪುರ್ ನಲ್ಲಿ 15, ವಾರಣಾಸಿಯಲ್ಲಿ 8, ಮೊರಾದಾಬಾದ್, ಮುಜಾಫರ್ ನಗರ್ ಮತ್ತು ಜೌನ್​ಪುರ್​ನಲ್ಲಿ ತಲಾ 4 ಮಂದಿ ಕೊವಿಡ್​ನಿಂದ ಸಾವಿಗೀಡಾಗಿದ್ದಾರೆ

ಲಕ್ನೊದಲ್ಲಿ 5,913 ಹೊಸ ಕೊವಿಡ್ ಪ್ರಕರಣಗಳು ವರದಿ ಆಗಿದ್ದು ಅಲಹಾಬಾದ್​ನಲ್ಲಿ 1,977, ಕಾನ್ಪುರ್​ನಲ್ಲಿ 1826 , ವಾರಣಾಸಿ 1,664 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ 6,41,292 ಕೊವಿಡ್ -19 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಹೇಳಿದೆ.

ಹಾಸಿಗೆಗಾಗಿ ಸರದಿಯಲ್ಲಿ 50 ಕ್ಕೂ ಹೆಚ್ಚು ರೋಗಿಗಳು ಲಕ್ನೊದಲ್ಲಿನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ಹೊರಗೆ ಸುಮಾರು 20 ಹಾಸಿಗೆಗಳು ಮತ್ತು ಕೆಲವು ಮೂಲಭೂತ ವೈದ್ಯಕೀಯ ಉಪಕರಣಗಳನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಕೊವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗಿದೆ. ಇಲ್ಲಿ ಥರ್ಮಲ್ ಸ್ಕ್ರೀನಿಂಗ್ ಇಲ್ಲ, ಸಾಮಾಜಿಕ ಅಂತರವಂತೂ ದೂರದ ಮಾತಾಗಿದೆ.

ಮಹಾರಾಷ್ಟ್ರದ ನಂತರ ಅತೀ ಹೆಚ್ಚು ಸಕ್ರಿಯ ಕೊವಿಡ್ ಪ್ರಕರಣಗಳಿರುವ ರಾಜ್ಯವಾಗಿದೆ ಉತ್ತರ ಪ್ರದೇಶ. ಲಕ್ನೊದ ಹೆಚ್ಚಿನ ಆಸ್ಪತ್ರೆಗಳಲ್ಲಿ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳ ತೀವ್ರ ಕೊರತೆ ಇದೆ. ಕೊವಿಡ್ ರೋಗಿಯಾಗಿರುವ ನಾನು ಈ ಆಸ್ಪತ್ರೆಯ ಕೊವಿಡ್ ವಾರ್ಡ್ ನಲ್ಲಿ ಬೆಡ್ ಗಾಗಿ ಎರಡು ದಿನ ಕಾಯಬೇಕಾಗಿ ಬಂತು ಅಂತಾರೆ ಲಕ್ನೊ ನಿವಾಸಿ 38ರ ಹರೆಯದ ವಿಕಾಸ್ ವರ್ಮಾ. ಪ್ರಸ್ತುತ ಆಸ್ಪತ್ರೆಯಲ್ಲಿ ಸುಮಾರ್ 520 ಬೆಡ್ ಗಳಿವೆ. ಇದರಲ್ಲಿ 427 ಐಸಿಯು ಮತ್ತು 133 ವೆಂಟಿಲೇಟರ್ ಇರುವಂತವುಗಳಾಗಿವೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ

(Uttar Pradesh Administration to treat Suspected Coronavirus Patients as Presumptive Covid patients)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!