AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ತೋರಿಸಿದ ಶಾರ್ಟ್​ಕಟ್​ ನಂಬಿ ಹೋಗಿ ಕಾರಿನ ಸಮೇತ ಕಾಲುವೆಗೆ ಹಾರಿದ ಚಾಲಕ

ಗೂಗಲ್​ ತೋರಿಸಿದ ಶಾರ್ಟ್​ಕಟ್​ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್​ ತೋರಿಸಿದ ಶಾರ್ಟ್​​ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಗೂಗಲ್ ತೋರಿಸಿದ ಶಾರ್ಟ್​ಕಟ್​ ನಂಬಿ ಹೋಗಿ ಕಾರಿನ ಸಮೇತ ಕಾಲುವೆಗೆ ಹಾರಿದ ಚಾಲಕ
ಕಾರುImage Credit source: NDTV
ನಯನಾ ರಾಜೀವ್
|

Updated on: Dec 04, 2024 | 10:31 AM

Share

ಗೂಗಲ್​ ತೋರಿಸಿದ ಶಾರ್ಟ್​ಕಟ್​ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್​ ತೋರಿಸಿದ ಶಾರ್ಟ್​​ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಬರೇಲಿಯಿಂದ ಪಿಲಿಭಿತ್‌ಗೆ ಪ್ರಯಾಣಿಸುತ್ತಿದ್ದಾಗ ಕಾಲಾಪುರ ಗ್ರಾಮದ ಬಳಿ ಗೂಗಲ್ ಮ್ಯಾಪ್​ ಹಾಕಿದ್ದಾರೆ ಆಗ ಅದು ಶಾರ್ಟ್​ ಕಟ್ ಮಾರ್ಗವೊಂದನ್ನು ತೋರಿಸಿತ್ತು. ಅದರ ಮೂಲಕ ಹೋಗಿ ನೇರವಾಗಿ ಕಾಲುವೆಗೆ ಹಾರಿದ್ದಾರೆ. ಗ್ರಾಮಸ್ಥರು ಅವರನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿದಾಗ ಅವರನ್ನು ರಕ್ಷಿಸಲಾಯಿತು. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರ್ಯಾಣದ ನೋಂದಣಿ ಇರುವ ಕಾರನ್ನು ಟ್ರ್ಯಾಕ್ಟರ್ ಸಹಾಯದಿಂದ ಕಾಲುವೆಯಿಂದ ಹೊರತೆಗೆಯಲಾಯಿತು.

10 ದಿನಗಳಲ್ಲಿ ಗೂಗಲ್​ಗೆ ಸಂಬಂಧಿಸಿದ ಎರಡನೇ ಅಪಘಾತವಿದು ಕಳೆದ ತಿಂಗಳು ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

ನವೆಂಬರ್ 24ರಂದು ಬರೇಲಿಯಿಂದ ಬದೌನ್ ಜಿಲ್ಲೆಯ ದತಗಂಜ್​ಗೆ ಪ್ರಯಾಣಿಸುತ್ತಿದ್ದಾಗ ಕಾರು ಚಾಲಕ ಗೂಗಲ್​ ನೋಡಿಕೊಂಡು ಬಂದಿದ್ದರು, ನಿರ್ಮಾಣ ಹಂತದಲ್ಲಿರುವ ಸೇತುವೆ ಏರಿದ್ದರು, ಅರ್ಧದಲ್ಲೇ ಸೇತುವೆ ಕಡಿತಗೊಂಡಿದ್ದ ಕಾರಣ ಫರೀದ್‌ಪುರದಲ್ಲಿ 50 ಅಡಿ ಕೆಳಗೆ ಹರಿಯುವ ರಾಮಗಂಗಾ ನದಿಗೆ ಕಾರು ಬಿದ್ದಿತ್ತು.

ಈ ವರ್ಷದ ಆರಮಭದಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಭಾಗಶಃ ಕುಸಿದಿತ್ತು, ಅದರ ಪುನರ್​ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದೆ. ಈ ಸೇತುವೆ ಅಸುರಕ್ಷಿತ ಎಂಬುದು ಅವರಿಗೆ ತಿಳಿದಿರಲಿಲ್ಲ.

ಇದು ನಿರ್ಮಾಣ ಹಂತದಲ್ಲಿರುವ ಸೇತುವೆ ಎಂದು ತೋರಿಸಲು ಯಾವುದೇ ಬ್ಯಾರಿಕೇಡ್​ಗಳಾಗಲಿ ಅಥವಾ ಸೂಚನಾ ಫಲಕಗಳನ್ನಾಗಲಿ ಅಲ್ಲಿ ಅಳವಡಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ