AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ತೋರಿಸಿದ ಶಾರ್ಟ್​ಕಟ್​ ನಂಬಿ ಹೋಗಿ ಕಾರಿನ ಸಮೇತ ಕಾಲುವೆಗೆ ಹಾರಿದ ಚಾಲಕ

ಗೂಗಲ್​ ತೋರಿಸಿದ ಶಾರ್ಟ್​ಕಟ್​ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್​ ತೋರಿಸಿದ ಶಾರ್ಟ್​​ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಗೂಗಲ್ ತೋರಿಸಿದ ಶಾರ್ಟ್​ಕಟ್​ ನಂಬಿ ಹೋಗಿ ಕಾರಿನ ಸಮೇತ ಕಾಲುವೆಗೆ ಹಾರಿದ ಚಾಲಕ
ಕಾರುImage Credit source: NDTV
ನಯನಾ ರಾಜೀವ್
|

Updated on: Dec 04, 2024 | 10:31 AM

Share

ಗೂಗಲ್​ ತೋರಿಸಿದ ಶಾರ್ಟ್​ಕಟ್​ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್​ ತೋರಿಸಿದ ಶಾರ್ಟ್​​ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಬರೇಲಿಯಿಂದ ಪಿಲಿಭಿತ್‌ಗೆ ಪ್ರಯಾಣಿಸುತ್ತಿದ್ದಾಗ ಕಾಲಾಪುರ ಗ್ರಾಮದ ಬಳಿ ಗೂಗಲ್ ಮ್ಯಾಪ್​ ಹಾಕಿದ್ದಾರೆ ಆಗ ಅದು ಶಾರ್ಟ್​ ಕಟ್ ಮಾರ್ಗವೊಂದನ್ನು ತೋರಿಸಿತ್ತು. ಅದರ ಮೂಲಕ ಹೋಗಿ ನೇರವಾಗಿ ಕಾಲುವೆಗೆ ಹಾರಿದ್ದಾರೆ. ಗ್ರಾಮಸ್ಥರು ಅವರನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿದಾಗ ಅವರನ್ನು ರಕ್ಷಿಸಲಾಯಿತು. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರ್ಯಾಣದ ನೋಂದಣಿ ಇರುವ ಕಾರನ್ನು ಟ್ರ್ಯಾಕ್ಟರ್ ಸಹಾಯದಿಂದ ಕಾಲುವೆಯಿಂದ ಹೊರತೆಗೆಯಲಾಯಿತು.

10 ದಿನಗಳಲ್ಲಿ ಗೂಗಲ್​ಗೆ ಸಂಬಂಧಿಸಿದ ಎರಡನೇ ಅಪಘಾತವಿದು ಕಳೆದ ತಿಂಗಳು ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

ನವೆಂಬರ್ 24ರಂದು ಬರೇಲಿಯಿಂದ ಬದೌನ್ ಜಿಲ್ಲೆಯ ದತಗಂಜ್​ಗೆ ಪ್ರಯಾಣಿಸುತ್ತಿದ್ದಾಗ ಕಾರು ಚಾಲಕ ಗೂಗಲ್​ ನೋಡಿಕೊಂಡು ಬಂದಿದ್ದರು, ನಿರ್ಮಾಣ ಹಂತದಲ್ಲಿರುವ ಸೇತುವೆ ಏರಿದ್ದರು, ಅರ್ಧದಲ್ಲೇ ಸೇತುವೆ ಕಡಿತಗೊಂಡಿದ್ದ ಕಾರಣ ಫರೀದ್‌ಪುರದಲ್ಲಿ 50 ಅಡಿ ಕೆಳಗೆ ಹರಿಯುವ ರಾಮಗಂಗಾ ನದಿಗೆ ಕಾರು ಬಿದ್ದಿತ್ತು.

ಈ ವರ್ಷದ ಆರಮಭದಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಭಾಗಶಃ ಕುಸಿದಿತ್ತು, ಅದರ ಪುನರ್​ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದೆ. ಈ ಸೇತುವೆ ಅಸುರಕ್ಷಿತ ಎಂಬುದು ಅವರಿಗೆ ತಿಳಿದಿರಲಿಲ್ಲ.

ಇದು ನಿರ್ಮಾಣ ಹಂತದಲ್ಲಿರುವ ಸೇತುವೆ ಎಂದು ತೋರಿಸಲು ಯಾವುದೇ ಬ್ಯಾರಿಕೇಡ್​ಗಳಾಗಲಿ ಅಥವಾ ಸೂಚನಾ ಫಲಕಗಳನ್ನಾಗಲಿ ಅಲ್ಲಿ ಅಳವಡಿಸಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ