AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ, ತನಿಖೆಗೆ ಆದೇಶ

ಮನೆಗೆ ಬಂದರೂ ಆರೋಗ್ಯ ಸುಧಾರಿಸದೇ ಇದ್ದಾಗ ಪತಿ ಶಂಶೇರ್ ಅಲಿ ಆಕೆಯನ್ನು ಅಮ್ರೋಹದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ನಜ್ರಾನಾಳ ಹೊಟ್ಟೆ ನೋವಿನ ಹಿಂದಿನ ಸತ್ಯ ಗೊತ್ತಾಗಿದ್ದು ಮತ್ತೊಂದು ಆಪರೇಷನ್ ಮಾಡಿ ಟವೆಲ್ ಹೊರತೆಗೆಯಲಾಗಿದೆ.

ಉತ್ತರ ಪ್ರದೇಶ: ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ, ತನಿಖೆಗೆ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 04, 2023 | 2:29 PM

Share

ಅಮ್ರೋಹಾ: ಉತ್ತರ ಪ್ರದೇಶದ (Uttar Pradesh) ಅಮ್ರೋಹಾದ ಬನ್ಸ್ ಖೇರಿ ಗ್ರಾಮದಲ್ಲಿ ಹೆರಿಗೆ ನೋವು (labour pain) ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಮಹಿಳೆಯ ಆಪರೇಶನ್ ನಡೆಸಿದ ವೈದ್ಯರೊಬ್ಬರು ಆಕೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ಘಟನೆ ವರದಿಯಾಗಿದೆ. ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ರಾಜೀವ್ ಸಿಂಘಾಲ್ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ವೈದ್ಯ ಮತ್ಲೂಬ್ ಅವರು ಅಮ್ರೋಹಾದ ನೌಗಾವಾನಾ ಸಾದತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೆ ನಡೆಸುತ್ತಿದ್ದ ಸೈಫೀ ನರ್ಸಿಂಗ್ ಹೋಮ್‌ನಲ್ಲಿ ಆಪರೇಶನ್ ನಡೆಸಿದ ನಂತರ ನಜ್ರಾನಾ ಅವರ ಹೊಟ್ಟೆಯಲ್ಲಿ ಟವೆಲ್ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಸಿಎಂಒ ಹೇಳಿದ್ದಾರೆ. ಮಾಹಿತಿಯ ಪ್ರಕಾರ, ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಟವೆಲ್ ನಜ್ರಾನಾ ಅವರ ಹೊಟ್ಟೆಯೊಳಗೆ ಉಳಿದಿದೆ. ಮಹಿಳೆ ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ ನಂತರ, ಅವರು ಅವಳನ್ನು ಇನ್ನೂ ಐದು ದಿನಗಳವರೆಗೆ ಅಡ್ಮಿಟ್ ಮಾಡಿದರು. ಹೀಗೆ ಯಾಕೆ ಅಡ್ಮಿಟ್ ಮಾಡಿದ್ದೀರಿ ಎಂದು ಕೇಳಿದಾಗ ಹೊರಗಿನ ಚಳಿಯಿಂದ ಆಕೆಗೆ ಹೊಟ್ಟೆ ನೋವು ಆಗಿದೆ ಎಂದು ಆಸ್ಪತ್ರೆಯವರು ಹೇಳಿದ್ದಾರೆ ಎನ್ನಲಾಗಿದೆ.

ಮನೆಗೆ ಬಂದರೂ ಆರೋಗ್ಯ ಸುಧಾರಿಸದೇ ಇದ್ದಾಗ ಪತಿ ಶಂಶೇರ್ ಅಲಿ ಆಕೆಯನ್ನು ಅಮ್ರೋಹದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ನಜ್ರಾನಾಳ ಹೊಟ್ಟೆ ನೋವಿನ ಹಿಂದಿನ ಸತ್ಯ ಗೊತ್ತಾಗಿದ್ದು ಮತ್ತೊಂದು ಆಪರೇಷನ್ ಮಾಡಿ ಟವೆಲ್ ಹೊರತೆಗೆಯಲಾಗಿದೆ. ಈ ಖಾಸಗಿ ವೈದ್ಯ ಮತ್ಲೂಬ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಲಿ ಸಿಎಂಒಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ

“ನಾನು ಘಟನೆಯ ಬಗ್ಗೆ ಮಾಧ್ಯಮ ವರದಿಗಳ ಮೂಲಕ ತಿಳಿದುಕೊಂಡಿದ್ದೇನೆ ಮತ್ತು ಈ ಬಗ್ಗೆ ಪರಿಶೀಲಿಸಲು ನೋಡಲ್ ಅಧಿಕಾರಿ ಡಾ.ಶರದ್ ಅವರನ್ನು ಕೇಳಿದ್ದೇನೆ. ತನಿಖೆ ಪೂರ್ಣಗೊಂಡ ನಂತರವೇ ನಾವು ಹೆಚ್ಚಿನ ವಿವರಗಳನ್ನು ನೀಡಬಹುದು” ಎಂದು ಸಿಎಂಒ ಸಿಂಘಾಲ್ ಮಂಗಳವಾರ ಹೇಳಿದ್ದಾರೆ.

ಆದರೆ, ಶಂಶೇರ್ ಅಲಿ ಈ ಬಗ್ಗೆ ಯಾವುದೇ ಲಿಖಿತ ದೂರು ನೀಡಿಲ್ಲ. ವೈದ್ಯರ ನಿರ್ಲಕ್ಷ್ಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂಒ ಭರವಸೆ ನೀಡಿದ್ದಾರೆ

ಸಿಎಂಒ ತನಿಖೆಯ ವರದಿ ಬಂದ ನಂತರ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ