AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಅಪಘಾತದಲ್ಲಿ ಗಾಯಗೊಂಡ ಮಗುವಿನ ಸ್ಥಿತಿ ಕಂಡು ಕಣ್ಣೀರು ಹಾಕಿದ ಅಧಿಕಾರಿ, ವಿಡಿಯೋ ವೈರಲ್

ಲಕ್ನೋ ವಿಭಾಗೀಯ ಆಯುಕ್ತ ರೋಷನ್ ಜೇಕಬ್ ಗಾಯಾಳುಗಳ ಕುಟುಂಬಗಳೊಂದಿಗೆ ಸಂವಹನ ನಡೆಸುವಾಗ ಅವರ ಸ್ಥಿತಿಯನ್ನಯ ಕಂಡು ಕಣ್ಣೀರು ಹಾಕಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Uttar Pradesh: ಅಪಘಾತದಲ್ಲಿ ಗಾಯಗೊಂಡ ಮಗುವಿನ ಸ್ಥಿತಿ ಕಂಡು ಕಣ್ಣೀರು ಹಾಕಿದ ಅಧಿಕಾರಿ, ವಿಡಿಯೋ ವೈರಲ್
Lucknow Divisional Commissioner Roshan JacobImage Credit source: NDTV
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 29, 2022 | 12:32 PM

Share

ದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 41 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 12 ಮಂದಿಯನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಇತರರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಲಕ್ನೋ ವಿಭಾಗೀಯ ಆಯುಕ್ತ ರೋಷನ್ ಜೇಕಬ್ ಗಾಯಾಳುಗಳ ಕುಟುಂಬಗಳೊಂದಿಗೆ ಸಂವಹನ ನಡೆಸುವಾಗ ಅವರ ಸ್ಥಿತಿಯನ್ನಯ ಕಂಡು ಕಣ್ಣೀರು ಹಾಕಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೀಡಿಯೊದಲ್ಲಿ, ಅಪಘಾತದಲ್ಲಿ ಗಾಯಗೊಂಡ ಮಗುವಿನ ಸ್ಥಿತಿಯನ್ನು ಕಂಡು ಜೇಕಬ್ ಅವರು ಕಣ್ಣೀರು ಹಾಕುತ್ತಾ ಅವರಿಗೆ ಸರಿಯಾದ ಚಿಕಿತ್ಸೆಯನ್ನು ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇದನ್ನು ಓದಿ: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ

ತಿರುವನಂತಪುರದಲ್ಲಿ ಜನಿಸಿದ ಜಾಕೋಬ್ 2004ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಎರಡು ವಾರಗಳ ಹಿಂದೆ ಲಕ್ನೋದ ಜಲಾವೃತ ಬೀದಿಗಳನ್ನು ಪರಿಶೀಲಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದಾಗ ಅವರು ಎಲ್ಲರ ಗಮನ ಸೆಳೆದಿದ್ದರು. ಯುಪಿ ಪೊಲೀಸರ ಪ್ರಕಾರ, ರಾಷ್ಟ್ರೀಯ ಹೆದ್ದಾರಿ 730 ರ ಐರಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ. ಬಸ್ ಧೌರ್ಹರಾದಿಂದ ಲಕ್ನೋಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಸಂತ್ರಸ್ತರ ಕುಟುಂಬಗಳಿಗೆ ಟ್ವೀಟ್ ಮೂಲಕ ಸಾಂತ್ವನ ಹೇಳಿದರು.

Published On - 12:32 pm, Thu, 29 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!