AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ವಿಧಾನಸಭೆಯ ಬಾಗಿಲಲ್ಲಿ ಶಾಸಕ ಪಾನ್ ಉಗುಳಿದ ವಿಚಾರ, ಆವರಣದೊಳಗೆ ಪಾನ್ ನಿಷೇಧ

ಉತ್ತರ ಪ್ರದೇಶದ ವಿಧಾನಸಭೆ ಆವರಣದಲ್ಲಿ ಇನ್ನುಮುಂದೆ ಯಾರೂ ಕೂಡ ಪಾನ್ ಮಸಾಲ ಬಾಯಿಗೆ ಹಾಕಿಕೊಂಡು ಬರುವಂತಿಲ್ಲ, ಒಂದೊಮ್ಮೆ ಅಂಥವರು ಕಣ್ಣಿಗೆ ಬಿದ್ದರೆ 1 ಸಾವಿರ ರೂ. ದಂಡವಿಧಿಸಲಾಗುವುದು ಎಂದು ಸ್ಪೀಕರ್ ಹೇಳಿದ್ದಾರೆ. ಶಾಸಕನ ಕೃತ್ಯದ ನಂತರ ಕಾರ್ಪೆಟ್ ಸ್ವಚ್ಛಗೊಳಿಸಿರುವುದಾಗಿ ವಿಧಾನಸಭೆಗೆ ತಿಳಿಸಿದ ಒಂದು ದಿನದ ನಂತರ ವಿಧಾನಸಭೆ ಸ್ಪೀಕರ್ ಸತೀಶ್ ಮಹಾನಾ ನಿಷೇಧದ ಘೋಷಣೆ ಮಾಡಿದರು.

ಉತ್ತರ ಪ್ರದೇಶ: ವಿಧಾನಸಭೆಯ ಬಾಗಿಲಲ್ಲಿ ಶಾಸಕ ಪಾನ್ ಉಗುಳಿದ ವಿಚಾರ, ಆವರಣದೊಳಗೆ ಪಾನ್ ನಿಷೇಧ
ಸ್ಪೀಕರ್
ನಯನಾ ರಾಜೀವ್
|

Updated on: Mar 05, 2025 | 3:11 PM

Share

ಉತ್ತರ ಪ್ರದೇಶ, ಮಾರ್ಚ್​ 05: ಶಾಸಕರೊಬ್ಬರು ಉತ್ತರ ಪ್ರದೇಶ ವಿಧಾನಸಭೆಯ ಬಾಗಿಲಿನಲ್ಲಿ ಪಾನ್ ಉಗುಳಿರುವ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ವಿಧಾನಸಭಾ ಆವರಣದಲ್ಲಿ ಪಾನ್ ಮಸಾಲ ಬ್ಯಾನ್​ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರಲಿರುವ ನಿಷೇಧದ ಜೊತೆಗೆ, ಉಲ್ಲಂಘಿಸುವವರಿಗೆ 1,000 ರೂ.ಗಳ ದಂಡವನ್ನು ಸಹ ವಿಧಿಸಲಾಗುವುದು.

ಶಾಸಕನ ಕೃತ್ಯದ ನಂತರ ಕಾರ್ಪೆಟ್ ಸ್ವಚ್ಛಗೊಳಿಸಿರುವುದಾಗಿ ವಿಧಾನಸಭೆಗೆ ತಿಳಿಸಿದ ಒಂದು ದಿನದ ನಂತರ ವಿಧಾನಸಭೆ ಸ್ಪೀಕರ್ ಸತೀಶ್ ಮಹಾನಾ ನಿಷೇಧದ ಘೋಷಣೆ ಮಾಡಿದರು.

ನಾನು ಆ ಶಾಸಕರನ್ನು ವೀಡಿಯೊದಲ್ಲಿ ನೋಡಿದೆ. ಆದರೆ ನಾನು ಯಾವುದೇ ವ್ಯಕ್ತಿಯನ್ನು ಅವಮಾನಿಸಲು ಬಯಸುವುದಿಲ್ಲ. ಆದ್ದರಿಂದ, ನಾನು ಅವರ ಹೆಸರುಗಳನ್ನು ತೆಗೆದುಕೊಳ್ಳುವುದಿಲ್ಲ. ಯಾರಾದರೂ ಹೀಗೆ ಮಾಡುವುದನ್ನು ನೋಡಿದರೆ, ಅವರನ್ನು ತಡೆಯಬೇಕು ಎಂದು ನಾನು ಎಲ್ಲಾ ಸದಸ್ಯರನ್ನು ಒತ್ತಾಯಿಸುತ್ತೇನೆ. ಈ ಸಭೆಯನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ.

ಮತ್ತಷ್ಟು ಓದಿ: ವಿಧಾನಸಭೆಯ ಬಾಗಿಲಲ್ಲೇ ಪಾನ್ ಮಸಾಲ ಉಗುಳಿದ ಶಾಸಕ

ಒಳ್ಳೆಯ ಇ-ಮೇಜ್ ಎಲ್ಲರ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತದೆ, ಹಾಗೆಯೇ ಕೆಟ್ಟ ನಡವಳಿಕೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ವಿಧಾನಸಭೆಯು ಉತ್ತರ ಪ್ರದೇಶದ ಜನರಿಗೆ ಸೇರಿದ್ದು, ವ್ಯಕ್ತಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಸ್ಪೀಕರ್ ಒತ್ತಿ ಹೇಳಿದರು.

ಮಂಗಳವಾರ ಸದನ ಆರಂಭಕ್ಕೂ ಮುನ್ನ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಸ್ಪೀಕರ್ ಸತೀಶ್ ಮಹಾನಾ, ಕೆಲ ಶಾಸಕರು ಪಾನ್ ಮಸಾಲಾ ತಿಂದು ವಿಧಾನಸೌಧದ ಸಭಾಂಗಣದಲ್ಲಿ ಉಗುಳಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬಳಿಕ ನಾನೇ ಖುದ್ದಾಗಿ ಸ್ವಚ್ಛತೆ ಮಾಡಿಸಿದ್ದೇನೆ. ಪಾನ್ ಮಸಾಲಾ ತಿಂದು ಉಗುಳಿದ ಶಾಸಕನನ್ನು ವಿಡಿಯೋ ಮೂಲಕ ನೋಡಿದ್ದೇನೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ