Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನ ಹತ್ತಿರ ಬರ್ತಿದ್ದಂತೆ ಬಾಲ ಬಿಚ್ಚಿದ ಉಗ್ರರು; ಯುಪಿ ಎಟಿಎಸ್ ಭರ್ಜರಿ ಬೇಟೆ ಇಬ್ಬರು ಅಲ್ ಖೈದಾ ಉಗ್ರರ ಅರೆಸ್ಟ್

ಗಡಿಯಲ್ಲಿ ಅಡಗಿ ಕೂತು ಕಿರಿಕ್ ಮಾಡ್ತಿದ್ದ ಉಗ್ರರು ದೇಶದ ಪ್ರಮುಖ ರಾಜ್ಯಗಳಲ್ಲೂ ವಿಧ್ವಂಸಕ ಕೃತ್ಯಗಳಿಗೆ ಹೊಂಚು ಹಾಕಿದ್ದರು. ಇನ್ನೇನು ತಮ್ಮ ದುಷ್ಕೃತ್ಯ ಜಾರಿ ಮಾಡ್ಬೇಕು, ಅರಾಜಕತೆ ಸೃಷ್ಟಿಸಬೇಕು ಅಂತಿರುವಾಗಲೇ ಎಟಿಎಸ್ ಟೀಂ ಅವ್ರನ್ನು ಹೆಡೆಮುರಿಕಟ್ಟಿದೆ. ಕೆಜಿಗಟ್ಟಲೆ ಸ್ಫೋಟಕ ಇಟ್ಟುಕೊಂಡು ರೆಡಿಯಾಗ್ತಿದ್ದ ಇಬ್ಬರು ಉಗ್ರರು ಅಂದರ್ ಆಗಿದ್ದಾರೆ.

ಸ್ವಾತಂತ್ರ್ಯ ದಿನ ಹತ್ತಿರ ಬರ್ತಿದ್ದಂತೆ ಬಾಲ ಬಿಚ್ಚಿದ ಉಗ್ರರು; ಯುಪಿ ಎಟಿಎಸ್ ಭರ್ಜರಿ ಬೇಟೆ ಇಬ್ಬರು ಅಲ್ ಖೈದಾ ಉಗ್ರರ ಅರೆಸ್ಟ್
ಅಲ್ ಖೈದಾ ಉಗ್ರರು
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2021 | 7:18 AM

ದೆಹಲಿ: ಇಷ್ಟು ದಿನ ಕಾಶ್ಮೀರದ ಗಡಿಪ್ರದೇಶಗಳಲ್ಲಿ ಸೇನೆ ಹಾಗೂ ನಾಗರಿಕರನ್ನು ಗುರಿ ಮಾಡ್ತಿದ್ದ ಉಗ್ರರು ದೇಶದ ಪ್ರಮುಖ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ ಹಾಕಿರೋದು ಬಯಲಾಗಿದೆ. ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳ ನಡೆಸಿದ ರೋಚಕ ಕಾರ್ಯಾಚರಣೆಯಲ್ಲಿ ಭಾರಿ ಭಯೋತ್ಪಾದಕ ದಾಳಿ ಕುತಂತ್ರ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ನಡೆಯಬಹುದಾಗಿದ್ದ ಭಾರಿ ಭಯೋತ್ಪಾದಕ ದಾಳಿ ತಪ್ಪಿದೆ. ಆತ್ಮಹತ್ಯಾ ಬಾಂಬ್ ದಾಳಿ ಮೂಲಕ ಭಾರತದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಅಲ್ ಖೈದಾ ಉಗ್ರ ಸಂಘಟನೆಯ ಇಬ್ಬರನ್ನು ಉತ್ತರ ಪ್ರದೇಶ ಎಟಿಎಸ್ ಬಂಧಿಸಿದೆ.

ಮಾನವ ಬಾಂಬರ್ ತರಬೇತಿ, ಕೆಜಿಗಟ್ಟಲೆ ಸ್ಫೋಟಕ ಪತ್ತೆ ಉತ್ತರ ಪ್ರದೇಶದ ಲಖನೌ ಬಳಿಯ ಕಾಕೋರಿಯ ಪ್ರದೇಶದ ಫರೀಡಿಪುರದಲ್ಲಿದಲ್ಕಿ ಅವಿತಿದ್ದ ಉಗ್ರರನ್ನು ಸೆರೆಹಿಡಿಯಲಾಗಿದೆ. ಶಾಹಿದ್‌‌ ಎಂಬುವವನಿಗೆ ಸೇರಿದ ಮನೆಯಿಂದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಪೊಲೀಸರು ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮನೆ ಸುತ್ತ ಮುತ್ತ ಕಾರ್ಯಚರಣೆ ನಡೆಸಿದ ಪೊಲೀಸರು ಎರಡು ಪ್ರೆಶರ್-ಕುಕ್ಕರ್ ಬಾಂಬ್‌ಗಳು, 6 ರಿಂದ 7 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಇಬ್ಬರು ಉಗ್ರರ ಬಂಧನದೊಂದಿಗೆ ಮತ್ತೊಂದು ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಅದೇನಂದ್ರೆ, ಬಂಧಿತ ಉಗ್ರರು ಮಾನವ ಬಾಂಬ್ ತರಬೇತಿ ನೀಡ್ತಿದ್ದರಂತೆ. ಯುವಕರನ್ನು ಸೇರಿಸಿಕೊಂಡು ಹಣದ ಆಮಿಷವೊಡ್ಡಿ ಮಾನವ ಬಾಂಬರ್ ಟ್ರೈನಿಂಗ್ ಕೊಡಲಾಗ್ತಿತ್ತು ಅನ್ನೋ ಮಾಹಿತಿ ಬಯಲಾಗಿದೆ.

ಬಿಜೆಪಿ ಹಿರಿಯ ನಾಯಕರೇ ಉಗ್ರರ ಮೇನ್ ಟಾರ್ಗೆಟ್ ಮಾನವ ಬಾಂಬ್ ಮೂಲಕ ಭಾರತದಲ್ಲಿ ಭಾರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ರಾಜಕೀಯ ನಾಯಕರನ್ನೂ ಟಾರ್ಗೆಟ್ ಮಾಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಇಬ್ಬರು ಭಯೋತ್ಪಾದಕರು ಲಖನೌದಲ್ಲಿ ಬಿಜೆಪಿ ಸಂಸದ ಮತ್ತು ಕೆಲವು ಹಿರಿಯ ಬಿಜೆಪಿ ನಾಯಕರನ್ನು ಗುರಿಯಾಗಿಸಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಆದ್ರೆ ಮುಂದೆ ಸಂಭವಿಸಬಹುದಾದ ಭಾರಿ ಭಯೋತ್ಪಾದಕ ಕೃತ್ಯವನ್ನು ಉತ್ತರ ಪ್ರದೇಶ ಎಟಿಎಸ್ ಪಡೆ ವಿಫಲಗೊಳಿಸಿದೆ. ಬಂಧಿತ ಉಗ್ರರ ವಿಚಾರಣೆಯಿಂದ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳೊ ಸಾಧ್ಯತೆ ಇದೆ.

(uttar pradesh ats arrests Two al qaeda terrorist From lucknow)

ಇದನ್ನೂ ಓದಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ಜಮ್ಮು ಕಾಶ್ಮೀರದ 11 ಸರ್ಕಾರಿ ನೌಕರರು ವಜಾ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್