AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ: ಜನವರಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ, ರಾಮ ಮಂದಿರದ ಕಾಮಗಾರಿ ಇನ್ನೆಷ್ಟು ಬಾಕಿ ಇದೆ?

ಜಗತ್ತಿನಾದ್ಯಂತ ಇರುವ ಕೋಟ್ಯಂತರ ರಾಮಭಕ್ತರ ಕನಸು ನನಸಾಗಲಿದೆ ಎಂದು ಚಂಪತ್ ರಾಯ್ ಹೇಳಿದರು. ಹಲವು ವರ್ಷಗಳಿಂದ ನಡೆಯುತ್ತಿರುವ ವಿವಾದದ ಬಳಿಕ ಇದೀಗ ರಾಮಲಲ್ಲಾ ಅಯೋಧ್ಯೆಯ ತಮ್ಮ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ. ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ ಜನವರಿ 16ರಿಂದ 24ರ ನಡುವೆ ಯಾವುದೇ ಶುಭ ಸಂದರ್ಭದಲ್ಲಿ ರಾಮಲಲ್ಲಾ ಮೂರ್ತಿಯನ್ನು ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದರು.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 21, 2023 | 4:39 PM

Share

ಅಯೋಧ್ಯೆ ಆಗಸ್ಟ್ 21: ಉತ್ತರ ಪ್ರದೇಶ (Uttar Pradesh) ಅಯೋಧ್ಯೆಯಲ್ಲಿ (Ayodhya) ಶ್ರೀರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗರ್ಭಗುಡಿ ಸಿದ್ಧವಾಗಿದೆ. ದೇಗುಲದ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳ್ಳುವುದರೊಂದಿಗೆ ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ (ಜನವರಿ 16ರಿಂದ 24ರ ನಡುವೆ) ರಾಮಲಲ್ಲಾ(Ram Lalla) ಪ್ರತಿಷ್ಠಾಪನೆ ನಡೆಯಲಿದೆ. ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಭಾನುವಾರ ಹರಿದ್ವಾರಕ್ಕೆ ಆಗಮಿಸಿದಾಗ ಇಲ್ಲಿನ ಸಂತರನ್ನು ಭೇಟಿ ಮಾಡಿ ಮಂದಿರ ನಿರ್ಮಾಣ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ನೀಡಿದರು. ಇದರೊಂದಿಗೆ ದೇವಸ್ಥಾನದಲ್ಲಿ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಆಹ್ವಾನ ನೀಡಲಾಗಿತ್ತು.

ವರ್ಷಗಳ ಕನಸು ಈಡೇರುತ್ತಿದೆ: ಚಂಪತ್ ರಾಯ್

ಜಗತ್ತಿನಾದ್ಯಂತ ಇರುವ ಕೋಟ್ಯಂತರ ರಾಮಭಕ್ತರ  ಕನಸು ನನಸಾಗಲಿದೆ ಎಂದು ಚಂಪತ್ ರಾಯ್ ಹೇಳಿದರು. ಹಲವು ವರ್ಷಗಳಿಂದ ನಡೆಯುತ್ತಿರುವ ವಿವಾದದ ಬಳಿಕ ಇದೀಗ ರಾಮಲಲ್ಲಾ ಅಯೋಧ್ಯೆಯ ತಮ್ಮ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ. ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ ಜನವರಿ 16ರಿಂದ 24ರ ನಡುವೆ ಯಾವುದೇ ಶುಭ ಸಂದರ್ಭದಲ್ಲಿ ರಾಮಲಲ್ಲಾ ಮೂರ್ತಿಯನ್ನು ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದರು.

ಪ್ರಾಣ ಪ್ರತಿಷ್ಠೆಗೆ ಸಂತರು ಮತ್ತು ಋಷಿಮುನಿಗಳನ್ನು ಆಹ್ವಾನಿಸುವ ಕುರಿತು ಮಾತನಾಡಿದ ಚಂಪತ್ ರಾಯ್, ದೇವಾಲಯದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಸಂತರು ಮತ್ತು ದರ್ಶಕರಿಗೆ ಮೌಖಿಕ ಆಹ್ವಾನವನ್ನು ನೀಡಲಾಗುತ್ತಿದೆ. ನವೆಂಬರ್‌ನಲ್ಲಿ ಸಾಧುಗಳು ಮತ್ತು ಸನ್ಯಾಸಿಗಳನ್ನು ಸಹ ವಿಧಿವತ್ತಾಗಿ ಆಹ್ವಾನಿಸಲಾಗುವುದು ಎಂದು ಹೇಳಿದರು. ಇದರೊಂದಿಗೆ ದೇಶದ ಎಲ್ಲಾ ಸಂಪ್ರದಾಯಗಳಿಗೆ ಸಂಬಂಧಿಸಿದ ಋಷಿಮುನಿಗಳು ಮತ್ತು ಸಂತರನ್ನು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಲಾಗಿದೆ.

ದೇವಸ್ಥಾನದ ಕಾಮಗಾರಿ ಎಲ್ಲಿವರೆಗೆ ಆಯ್ತು?

ದೇಗುಲದ ಸಿದ್ಧತೆ ಕುರಿತು ಮಾಹಿತಿ ನೀಡಿದ ಚಂಪತ್ ರಾಯ್, ಗರ್ಭಗುಡಿಯಲ್ಲಿ ರಾಮಲಲ್ಲಾ ಭವ್ಯ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳವನ್ನು ಸಂಪೂರ್ಣ ಸಿದ್ಧಪಡಿಸಲಾಗಿದೆ ಎಂದರು. ಎರಡು ಅಂತಸ್ತಿನ ದೇವಸ್ಥಾನದ ಮೊದಲ ಅಂತಸ್ತಿನ ಮೇಲ್ಛಾವಣಿಯ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದ ಅವರು, ದೇವಸ್ಥಾನದಲ್ಲಿ ಭಕ್ತರ ದರ್ಶನದ ಜೊತೆಗೆ ನಿರ್ಮಾಣ ಕಾರ್ಯವೂ ಮುಂದುವರಿಯಲಿದ್ದು, ಇದರಿಂದ ಯಾರಿಗೂ ಯಾವುದೇ ಸಮಸ್ಯೆಗಳಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ

ಈ ಸಂದರ್ಭದಲ್ಲಿ, ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ರವೀಂದ್ರ ಪುರಿ ಮಾತನಾಡಿ, ಭಗವಾನ್ ಶ್ರೀರಾಮನು ತನ್ನ ದೇವಾಲಯದ ನಿರ್ಮಾಣದ ಜವಾಬ್ದಾರಿಯನ್ನು ಚಂಪತ್ ರಾಯ್ ಅವರಿಗ ವಹಿಸಿದ್ದಾನೆ. ಅವರನ್ನು ನೋಡಿದರೆ ಸಂತರಿಗೆ ದೇವರ ದರ್ಶನವಾದಂತೆ ಎಂದು ನಾವು ನಂಬುತ್ತೇವೆ. ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇಗುಲದ ಉದ್ಘಾಟನಾ ಸಮಾರಂಭಕ್ಕೆ ಎಲ್ಲ ಸಂತರು, ಋಷಿಮುನಿಗಳು ಆಗಮಿಸಬೇಕು ಎಂದು ಪುರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ