AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದೌನ್‌ನ ರಾಜ್ಯಪಾಲರಿಗೆ ಸಮನ್ಸ್ ನೀಡಿದ ಎಸ್‌ಡಿಎಂ; ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ

ಮಾಹಿತಿಯ ಪ್ರಕಾರ, ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಲೋಡಾ ಬಹೇದಿ ಗ್ರಾಮದ ನಿವಾಸಿ ಚಂದ್ರಹಾಸ್ ಅವರು ಸದರ್ ತಹಸಿಲ್‌ನ ಎಸ್‌ಡಿಎಂ ನ್ಯಾಯಾಂಗ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಲೇಖರಾಜ್, ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ರಾಜ್ಯಪಾಲರ ವಿರದ್ಧ ದೂರಲಾಗಿದೆ. ತಮ್ಮ ಚಿಕ್ಕಮ್ಮ ಕಾಟೋರಿ ದೇವಿ ಅವರ ಜಮೀನನ್ನು ಸಂಬಂಧಿಕರು ತಮ್ಮ ಹೆಸರಿಗೆ ಪಡೆದಿದ್ದಾರೆ ಎಂದು ಚಂದ್ರಹಾಸ್ ಆರೋಪಿಸಿದ್ದಾರೆ.

ಬದೌನ್‌ನ ರಾಜ್ಯಪಾಲರಿಗೆ ಸಮನ್ಸ್ ನೀಡಿದ ಎಸ್‌ಡಿಎಂ; ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ
ಆನಂದಿಬೆನ್ ಪಟೇಲ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 27, 2023 | 12:43 PM

ಬದೌನ್ ಅಕ್ಟೋಬರ್27 : ಉತ್ತರಪ್ರದೇಶದ (Uttar Pradesh) ಬದೌನ್ ಜಿಲ್ಲೆಯಲ್ಲಿ ವಿಶಿಷ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬದೌನ್ ಸದರ್ ತಹಸಿಲ್ ಎಸ್‌ಡಿಎಂ (SDM) ಎಸ್‌ಪಿ ವರ್ಮಾ ಅವರು ಭೂ ವಿವಾದ ಪ್ರಕರಣದಲ್ಲಿ (Land Dispute) ರಾಜ್ಯಪಾಲರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಈ ಸಮನ್ಸ್‌ನಲ್ಲಿ, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಅಕ್ಟೋಬರ್ 18 ರಂದು ಎಸ್‌ಡಿಎಂ ನ್ಯಾಯಾಲಯಕ್ಕೆ ಹಾಜರಾಗಲು ಮತ್ತು ಅವರ ಪರವಾಗಿ ಹಾಜರುಪಡಿಸಲು ಆದೇಶಿಸಲಾಗಿದೆ. ಸಮನ್ಸ್ ಲಕ್ನೋದ ರಾಜಭವನ ತಲುಪಿದಾಗ ಕೋಲಾಹಲ ಉಂಟಾಯಿತು. ಇದಕ್ಕೆ ರಾಜ್ಯಪಾಲರ ಸಚಿವಾಲಯ ಬದೌನ್ ಡಿಎಂಗೆ ಪತ್ರ ಬರೆಯುವ ಮೂಲಕ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ, ಎಸ್‌ಡಿಎಂಗೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ಮಾಹಿತಿಯ ಪ್ರಕಾರ, ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಲೋಡಾ ಬಹೇದಿ ಗ್ರಾಮದ ನಿವಾಸಿ ಚಂದ್ರಹಾಸ್ ಅವರು ಸದರ್ ತಹಸಿಲ್‌ನ ಎಸ್‌ಡಿಎಂ ನ್ಯಾಯಾಂಗ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಲೇಖರಾಜ್, ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ರಾಜ್ಯಪಾಲರ ವಿರದ್ಧ ದೂರಲಾಗಿದೆ. ತಮ್ಮ ಚಿಕ್ಕಮ್ಮ ಕಾಟೋರಿ ದೇವಿ ಅವರ ಜಮೀನನ್ನು ಸಂಬಂಧಿಕರು ತಮ್ಮ ಹೆಸರಿಗೆ ಪಡೆದಿದ್ದಾರೆ ಎಂದು ಚಂದ್ರಹಾಸ್ ಆರೋಪಿಸಿದ್ದಾರೆ. ಸಂಬಂಧಿಕರು ಈ ಜಮೀನನ್ನು ಲೇಖರಾಜ್ ಎಂಬ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ.

ಕೆಲವು ದಿನಗಳ ನಂತರ, ಈ ಭೂಮಿಯ ಸ್ವಲ್ಪ ಭಾಗವನ್ನು ಸರ್ಕಾರವು ಸ್ವಾಧೀನಪಡಿಸಿಕೊಂಡಿತು. ಸ್ವಾಧೀನಪಡಿಸಿಕೊಂಡ ನಂತರ ಲೇಖರಾಜ್ 12 ಲಕ್ಷ ರೂ. ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಾದವನ್ನು ಮಂಡಿಸುವಂತೆ ಲೇಖರಾಜ್ ಮತ್ತು ರಾಜ್ಯಪಾಲರಿಗೆ ಎಸ್‌ಡಿಎಂ ನ್ಯಾಯಾಂಗ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ; ಇಡಿ ಅಧಿಕಾರಿಗಳಿಂದ ಬಂಗಾಳದ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ

ಕಂದಾಯ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ಹೊರಡಿಸಲಾದ ಈ ಸಮನ್ಸ್ ರಾಜಭವನಕ್ಕೆ ತಲುಪಿದ ತಕ್ಷಣ, ಕೋಲಾಹಲ ಉಂಟಾಯಿತು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಬ್ರದಿನಾಥ್ ಸಿಂಗ್ ಬದೌನ್ ಡಿಎಂಗೆ ಪತ್ರ ಬರೆಯುವ ಮೂಲಕ ತಮ್ಮ ಆಕ್ಷೇಪಣೆಯನ್ನು ವ್ಯಕ್ತಪಡಿಸಿದರು. ರಾಜ್ಯಪಾಲರಿಗೆ ಈ ಸಮನ್ಸ್ ಸಂವಿಧಾನದ 361ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಎಸ್‌ಡಿಎಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಶೇಷ ಕಾರ್ಯದರ್ಶಿ ಡಿಎಂಗೆ ಸೂಚಿಸಿದರು. ಅಲ್ಲದೆ ಭವಿಷ್ಯದಲ್ಲಿ ಇಂತಹ ತಪ್ಪು ಮರುಕಳಿಸಬಾರದು ಎಂದು ಹೇಳಿರುವುದಾಗಿ ನವಭಾರತ್ ಟೈಮ್ಸ್ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್