AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ರೈಲ್ವೆ ಹಳಿ ಮೇಲೆ ಕಟ್ಟಿಗೆಗಳನ್ನು ಎಸೆದು ರೈಲು ಹಳಿ ತಪ್ಪಿಸುವ ಯತ್ನ

ರೈಲ್ವೆ ಹಳಿ ಮೇಲೆ ಮರದ ದಿಮ್ಮಿಗಳ್ನು ಎಸೆದು ರೈಲು ಹಳಿ(Railway Track) ತಪ್ಪಿಸುವ ಯತ್ನ ಮಾಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್​ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೆ ಹಳಿಯಲ್ಲಿ ಅರ್ಥಿಂಗ್ ವೈರ್‌ನಲ್ಲಿ ಸಿಲುಕಿಕೊಂಡಿದ್ದ ಮರದ ದಿಮ್ಮಿಗಳನ್ನು ಇರಿಸಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಕಠ್ಗೋಡಮ್ ಎಕ್ಸ್‌ಪ್ರೆಸ್ ಹಳಿ ತಪ್ಪಿಸಲು ದುಷ್ಕರ್ಮಿಗಳು ಸಂಚು ಹೂಡಿದ್ದರು. ಆದರೆ ಇದು ರೈಲ್ವೆ ಲೋಕೋ ಪೈಲಟ್ ಗಮನಕ್ಕೆ ಬಂದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಹೀಗಾಗಿ ಸಂಭವಿಸಬೇಕಿದ್ದ ದೊಡ್ಡ ಅನಾಹುತವೇ ತಪ್ಪಿದಂತಾಗಿದೆ.

ಉತ್ತರ ಪ್ರದೇಶ: ರೈಲ್ವೆ ಹಳಿ ಮೇಲೆ ಕಟ್ಟಿಗೆಗಳನ್ನು ಎಸೆದು ರೈಲು ಹಳಿ ತಪ್ಪಿಸುವ ಯತ್ನ
ರೈಲ್ವೆ ಹಳಿ
ನಯನಾ ರಾಜೀವ್
|

Updated on:May 20, 2025 | 10:10 AM

Share

ಉತ್ತರ ಪ್ರದೇಶ. ಮೇ 20: ರೈಲ್ವೆ ಹಳಿ ಮೇಲೆ ಮರದ ಕಟ್ಟಿಗೆಗಳನ್ನು ಎಸೆದು ರೈಲು ಹಳಿ(Railway Track) ತಪ್ಪಿಸುವ ಯತ್ನ ಮಾಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್​ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೆ ಹಳಿಯಲ್ಲಿ ಅರ್ಥಿಂಗ್ ವೈರ್‌ನಲ್ಲಿ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಟ್ಟಿಗೆಗಳನ್ನು ಇರಿಸಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಕಠ್ಗೋಡಮ್ ಎಕ್ಸ್‌ಪ್ರೆಸ್ ಹಳಿ ತಪ್ಪಿಸಲು ದುಷ್ಕರ್ಮಿಗಳು ಸಂಚು ಹೂಡಿದ್ದರು.

ಆದರೆ ಇದು ರೈಲ್ವೆ ಲೋಕೋ ಪೈಲಟ್ ಗಮನಕ್ಕೆ ಬಂದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಹೀಗಾಗಿ ಸಂಭವಿಸಬೇಕಿದ್ದ ದೊಡ್ಡ ಅನಾಹುತವೇ ತಪ್ಪಿದಂತಾಗಿದೆ. ಹರ್ದೋಯ್-ಲಕ್ನೋ ರೈಲು ಮಾರ್ಗದಲ್ಲಿ ದಲೇಲ್‌ನಗರ ಮತ್ತು ಉಮರ್ತಾಲಿ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ. ಸೋಮವಾರ ಸಂಜೆ 5.45 ರ ಸುಮಾರಿಗೆ 20504 ನವದೆಹಲಿ-ದಿಬ್ರುಗಢ ರಾಜಧಾನಿ ಎಕ್ಸ್‌ಪ್ರೆಸ್ ಲಕ್ನೋ ಕಡೆಗೆ ಹೋಗುತ್ತಿದ್ದಾಗ ಮೊದಲ ಪ್ರಯತ್ನ ಮಾಡಲಾಯಿತು. ದುಷ್ಕರ್ಮಿಗಳು ಮರದ ತುಂಡನ್ನು ಕಬ್ಬಿಣದ ಅರ್ಥಿಂಗ್ ತಂತಿಗೆ ಬಿಗಿಯಾಗಿ ಜೋಡಿಸಿ, ಹಳಿತಪ್ಪಿಸಲು ಅದನ್ನು ಕೆಳ ಹಳಿಯಲ್ಲಿ ಇಟ್ಟಿದ್ದರು.

ಆದರೆ, ರಾಜಧಾನಿ ಎಕ್ಸ್‌ಪ್ರೆಸ್‌ನ ಚಾಲಕ ಹಳಿಯಲ್ಲಿ ಅಡಚಣೆಯನ್ನು ಗಮನಿಸಿ ತುರ್ತು ಬ್ರೇಕ್‌ಗಳನ್ನು ಹಾಕಿದ್ದರಿಂದ ರೈಲು ನಿಂತಿತು. ನಂತರ ಮರದ ಬ್ಲಾಕ್ ಮತ್ತು ಅರ್ಥಿಂಗ್ ವೈರ್ ತೆಗೆದು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈಲು ಸುಮಾರು ಹತ್ತು ನಿಮಿಷಗಳ ಕಾಲ ವಿಳಂಬವಾಗಿ ಪ್ರಯಾಣ ಪುನರಾರಂಭವಾಯಿತು.

ಮತ್ತಷ್ಟು ಓದಿ: Viral : ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಹೋದ ಯುವಕ, ಮುಂದೇನಾಯ್ತು ನೋಡಿ

ರಾಜಧಾನಿ ಎಕ್ಸ್‌ಪ್ರೆಸ್ ಹಾದುಹೋದ ಕೂಡಲೇ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ 15044 ಕಠ್ಗೋಡಮ್-ಲಕ್ನೋ ಎಕ್ಸ್‌ಪ್ರೆಸ್ ಅನ್ನು ಹಳಿತಪ್ಪಿಸಲು ಅದೇ ವಿಧಾನವನ್ನು ಬಳಸಲಾಯಿತು. ಈ ರೈಲಿನ ಚಾಲಕ ಕೂಡ ಅಡಚಣೆಯನ್ನು ಗಮನಿಸಿ ಸಮಯಕ್ಕೆ ಸರಿಯಾಗಿ ರೈಲನ್ನು ನಿಲ್ಲಿಸಿದನು. ಹಳಿಯ ಮೇಲೆ ಇರಿಸಲಾಗಿದ್ದ ವಸ್ತುಗಳನ್ನು ತೆಗೆದು ಲಕ್ನೋ ಕಡೆಗೆ ಮುಂದುವರೆದಿದ್ದರು.

ಎರಡೂ ರೈಲು ಚಾಲಕರು ದಲೇಲ್‌ನಗರದ ಸ್ಟೇಷನ್ ಮಾಸ್ಟರ್‌ಗೆ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಅಧಿಕಾರಿಗಳಿಂದ ತ್ವರಿತ ಪ್ರತಿಕ್ರಿಯೆ ದೊರೆಯಿತು. ರೈಲ್ವೆ ಇಲಾಖೆಯ ಅಧಿಕಾರಿಗಳು, ಸರ್ಕಾರಿ ರೈಲ್ವೆ ಪೊಲೀಸ್ (GRP), ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು.

ಈ ಘಟನೆಯು ರೈಲ್ವೆ ಇಲಾಖೆಯಲ್ಲಿ ಭೀತಿಯನ್ನು ಹುಟ್ಟುಹಾಕಿತು, ಆದರೂ ಅಧಿಕಾರಿಗಳು ಇಲ್ಲಿಯವರೆಗೆ ಮಾಧ್ಯಮಗಳಿಗೆ ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಿದ್ದಾರೆ. ಈ ವಿಷಯವು ಪ್ರಸ್ತುತ ತನಿಖೆಯಲ್ಲಿದೆ ಮತ್ತು ಕೃತ್ಯಕ್ಕೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮೊದಲು ಉತ್ತರ ಪ್ರದೇಶದಲ್ಲಿ ಇಂತಹ ಹಲವು ಘಟನೆಗಳು ನಡೆದಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Tue, 20 May 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ