AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ಸೇವಿಸಿ, ಕೊರೊನಾದಿಂದ ದೂರವಿರಿ: ಉತ್ತರ ಪ್ರದೇಶದ ಬಿಜೆಪಿ ಶಾಸಕ

BJP MLA Surendra Singh: ವಿಡಿಯೊದಲ್ಲಿ  ಪತಂಜಲಿ  ಗೋಮೂತ್ರದ ಬಾಟಲಿ ಹಿಡಿದುಕೊಂಡಿರುವ ಸುರೇಂದ್ರ ಸಿಂಗ್ ಅದರಿಂದ 50 ಮಿಲ್ಲಿ  ಲೀಟರ್ ಗೋಮೂತ್ರವನ್ನು ತಣ್ಣೀರಲ್ಲಿ  ಬೆರೆಸಿ  ಪ್ರತಿದಿನ ಬೆಳಗ್ಗೆ ಕುಡಿದರೆ  ಕೊರೊನಾವೈರಸ್ ವಿರುದ್ಧ ನೈಸರ್ಗಿಕ ಪ್ರತಿರೋಧಶಕ್ತಿ ಸಿಗುತ್ತದೆ ಎಂದಿದ್ದಾರೆ.

ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ಸೇವಿಸಿ, ಕೊರೊನಾದಿಂದ ದೂರವಿರಿ: ಉತ್ತರ ಪ್ರದೇಶದ ಬಿಜೆಪಿ ಶಾಸಕ
ಸುರೇಂದ್ರ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 09, 2021 | 5:20 PM

Share

ಬೈರಿಯಾ (ಉತ್ತರ ಪ್ರದೇಶ): ಪ್ರತಿದಿನ ಬೆಳಗ್ಗೆ  ಖಾಲಿ ಹೊಟ್ಟೆಯಲ್ಲಿ  ಗೋಮೂತ್ರ ಸೇವಿಸಿದರೆ ಕೊರೊನಾವೈರಸ್ ನಿಂದ ರಕ್ಷಣೆ ಪಡೆಯಬಹುದು ಎಂದು ಬಿಜೆಪಿ  ಶಾಸಕ ಸುರೇಂದ್ರ  ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಬೈರಿಯಾ ವಿಧಾನಸಭಾ ಕ್ಷೇತ್ರದ  ಶಾಸಕ ಸುರೇಂದ್ರ ಸಿಂಗ್ ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಡಿಯೊವೊಂದನ್ನು  ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.

ವಿಡಿಯೊದಲ್ಲಿ  ಪತಂಜಲಿ  ಗೋಮೂತ್ರದ ಬಾಟಲಿ ಹಿಡಿದುಕೊಂಡಿರುವ ಸಿಂಗ್ ಅದರಿಂದ 50 ಮಿಲ್ಲಿ  ಲೀಟರ್ ಗೋಮೂತ್ರವನ್ನು ತಣ್ಣೀರಲ್ಲಿ  ಬೆರೆಸಿ  ಪ್ರತಿದಿನ ಬೆಳಗ್ಗೆ ಕುಡಿದರೆ  ಕೊರೊನಾವೈರಸ್ ವಿರುದ್ಧ ನೈಸರ್ಗಿಕ ಪ್ರತಿರೋಧಶಕ್ತಿ ಸಿಗುತ್ತದೆ ಎಂದಿದ್ದಾರೆ.

ಭಾರತದಲ್ಲಿ  ಕೊವಿಡ್ ಎರಡನೇ ಅಲೆ ಇರುವಾಗಲೂ ನಾನು ಪ್ರತಿದಿನ ಸರಿ ಸುಮಾರು 18 ಗಂಟೆಗಳ ಕಾಲ ಜನರೊಂದಿಗೆ ಹೊರಗೆ ಇರುತ್ತೇನೆ. ಆದರೂ ನಾನು ಆರೋಗ್ಯವಂತನಾಗಿದ್ದೇನೆ ಎಂದಿದ್ದಾರೆ.

ಅನುಮಾನಿಸಬೇಡಿ, ವಿಜ್ಞಾನಿಗಳು ನಂಬುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಕೊವಿಡ್ -19 ನಂತಹ ಮಾರಣಾಂತಿಕ ವೈರಸ್ ಅನ್ನು ತೊಡೆದುಹಾಕಲು ಗೋಮೂತ್ರಕ್ಕೆ ಮಾತ್ರ ಶಕ್ತಿ ಇದೆ ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಸಿಂಗ್ ವಿಡಿಯೊದಲ್ಲಿ ಹೇಳಿದ್ದಾರೆ.

ಎಲ್ಲಾ ವೈಜ್ಞಾನಿಕ ಜ್ಞಾನವು ಕೊವಿಡ್ ಮುಂದೆ ವಿಫಲವಾಗಿದೆ ಎಂದು ಹೇಳಿದ ಸಿಂಗ್, “ಇಷ್ಟು ವೈಜ್ಞಾನಿಕ ಪ್ರಗತಿಯ ನಂತರವೂ ಲಕ್ಷಗಟ್ಟಲೆ ಜನ ಸಾಯುತ್ತಿದ್ದಾರೆ. ಆದ್ದರಿಂದ ಈ ಪರಿಸ್ಥಿತಿಯಲ್ಲಿ ಜನರು ದೇವರನ್ನು ನೆನಪು ಮಾಡಿಕೊಳ್ಳಬೇಕು ಮತ್ತು ಹಳೆಯ ತಲೆಮಾರುಗಳು ಅಂತಹ ವಿಷಯಗಳಿಗೆ ಚಿಕಿತ್ಸೆ ನೀಡಲು ಏನು  ಮಾಡುತ್ತಿದ್ದರು ಎಂಬುದನ್ನು ನೋಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಗೋಶಾಲೆಯಲ್ಲಿಯೇ ಕೊವಿಡ್​ ಐಸೋಲೇಶನ್ ಕೇಂದ್ರ ಸ್ಥಾಪನೆ; ಗೋಮೂತ್ರ, ಹಾಲು, ತುಪ್ಪದ ಔಷಧಗಳಿಂದಲೇ ಚಿಕಿತ್ಸೆ

(Uttar Pradesh BJP MLA Surendra Singh claimed consuming gaumutra will guarantee protection from coronavirus)

Published On - 5:10 pm, Sun, 9 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!