AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ಸೇವಿಸಿ, ಕೊರೊನಾದಿಂದ ದೂರವಿರಿ: ಉತ್ತರ ಪ್ರದೇಶದ ಬಿಜೆಪಿ ಶಾಸಕ

BJP MLA Surendra Singh: ವಿಡಿಯೊದಲ್ಲಿ  ಪತಂಜಲಿ  ಗೋಮೂತ್ರದ ಬಾಟಲಿ ಹಿಡಿದುಕೊಂಡಿರುವ ಸುರೇಂದ್ರ ಸಿಂಗ್ ಅದರಿಂದ 50 ಮಿಲ್ಲಿ  ಲೀಟರ್ ಗೋಮೂತ್ರವನ್ನು ತಣ್ಣೀರಲ್ಲಿ  ಬೆರೆಸಿ  ಪ್ರತಿದಿನ ಬೆಳಗ್ಗೆ ಕುಡಿದರೆ  ಕೊರೊನಾವೈರಸ್ ವಿರುದ್ಧ ನೈಸರ್ಗಿಕ ಪ್ರತಿರೋಧಶಕ್ತಿ ಸಿಗುತ್ತದೆ ಎಂದಿದ್ದಾರೆ.

ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ಸೇವಿಸಿ, ಕೊರೊನಾದಿಂದ ದೂರವಿರಿ: ಉತ್ತರ ಪ್ರದೇಶದ ಬಿಜೆಪಿ ಶಾಸಕ
ಸುರೇಂದ್ರ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on:May 09, 2021 | 5:20 PM

Share

ಬೈರಿಯಾ (ಉತ್ತರ ಪ್ರದೇಶ): ಪ್ರತಿದಿನ ಬೆಳಗ್ಗೆ  ಖಾಲಿ ಹೊಟ್ಟೆಯಲ್ಲಿ  ಗೋಮೂತ್ರ ಸೇವಿಸಿದರೆ ಕೊರೊನಾವೈರಸ್ ನಿಂದ ರಕ್ಷಣೆ ಪಡೆಯಬಹುದು ಎಂದು ಬಿಜೆಪಿ  ಶಾಸಕ ಸುರೇಂದ್ರ  ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಬೈರಿಯಾ ವಿಧಾನಸಭಾ ಕ್ಷೇತ್ರದ  ಶಾಸಕ ಸುರೇಂದ್ರ ಸಿಂಗ್ ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಡಿಯೊವೊಂದನ್ನು  ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.

ವಿಡಿಯೊದಲ್ಲಿ  ಪತಂಜಲಿ  ಗೋಮೂತ್ರದ ಬಾಟಲಿ ಹಿಡಿದುಕೊಂಡಿರುವ ಸಿಂಗ್ ಅದರಿಂದ 50 ಮಿಲ್ಲಿ  ಲೀಟರ್ ಗೋಮೂತ್ರವನ್ನು ತಣ್ಣೀರಲ್ಲಿ  ಬೆರೆಸಿ  ಪ್ರತಿದಿನ ಬೆಳಗ್ಗೆ ಕುಡಿದರೆ  ಕೊರೊನಾವೈರಸ್ ವಿರುದ್ಧ ನೈಸರ್ಗಿಕ ಪ್ರತಿರೋಧಶಕ್ತಿ ಸಿಗುತ್ತದೆ ಎಂದಿದ್ದಾರೆ.

ಭಾರತದಲ್ಲಿ  ಕೊವಿಡ್ ಎರಡನೇ ಅಲೆ ಇರುವಾಗಲೂ ನಾನು ಪ್ರತಿದಿನ ಸರಿ ಸುಮಾರು 18 ಗಂಟೆಗಳ ಕಾಲ ಜನರೊಂದಿಗೆ ಹೊರಗೆ ಇರುತ್ತೇನೆ. ಆದರೂ ನಾನು ಆರೋಗ್ಯವಂತನಾಗಿದ್ದೇನೆ ಎಂದಿದ್ದಾರೆ.

ಅನುಮಾನಿಸಬೇಡಿ, ವಿಜ್ಞಾನಿಗಳು ನಂಬುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಕೊವಿಡ್ -19 ನಂತಹ ಮಾರಣಾಂತಿಕ ವೈರಸ್ ಅನ್ನು ತೊಡೆದುಹಾಕಲು ಗೋಮೂತ್ರಕ್ಕೆ ಮಾತ್ರ ಶಕ್ತಿ ಇದೆ ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಸಿಂಗ್ ವಿಡಿಯೊದಲ್ಲಿ ಹೇಳಿದ್ದಾರೆ.

ಎಲ್ಲಾ ವೈಜ್ಞಾನಿಕ ಜ್ಞಾನವು ಕೊವಿಡ್ ಮುಂದೆ ವಿಫಲವಾಗಿದೆ ಎಂದು ಹೇಳಿದ ಸಿಂಗ್, “ಇಷ್ಟು ವೈಜ್ಞಾನಿಕ ಪ್ರಗತಿಯ ನಂತರವೂ ಲಕ್ಷಗಟ್ಟಲೆ ಜನ ಸಾಯುತ್ತಿದ್ದಾರೆ. ಆದ್ದರಿಂದ ಈ ಪರಿಸ್ಥಿತಿಯಲ್ಲಿ ಜನರು ದೇವರನ್ನು ನೆನಪು ಮಾಡಿಕೊಳ್ಳಬೇಕು ಮತ್ತು ಹಳೆಯ ತಲೆಮಾರುಗಳು ಅಂತಹ ವಿಷಯಗಳಿಗೆ ಚಿಕಿತ್ಸೆ ನೀಡಲು ಏನು  ಮಾಡುತ್ತಿದ್ದರು ಎಂಬುದನ್ನು ನೋಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಗೋಶಾಲೆಯಲ್ಲಿಯೇ ಕೊವಿಡ್​ ಐಸೋಲೇಶನ್ ಕೇಂದ್ರ ಸ್ಥಾಪನೆ; ಗೋಮೂತ್ರ, ಹಾಲು, ತುಪ್ಪದ ಔಷಧಗಳಿಂದಲೇ ಚಿಕಿತ್ಸೆ

(Uttar Pradesh BJP MLA Surendra Singh claimed consuming gaumutra will guarantee protection from coronavirus)

Published On - 5:10 pm, Sun, 9 May 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್