AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದ ಬಿಜೆಪಿ

Uttar Pradesh ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಾಠಕ್, "ಪಕ್ಷದ ಪ್ರಮುಖ ಗಮನವು 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ ಮತ್ತು ಜನರಲ್ಲಿ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ" ಎಂದು ಹೇಳಿದರು.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದ ಬಿಜೆಪಿ
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 28, 2021 | 5:26 PM

Share

ಲಖನೌ: ಉತ್ತರ ಪ್ರದೇಶದ ಬಿಜೆಪಿ ತನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆಯನ್ನು ಕಳುಹಿಸಿದ್ದು, 2022 ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬೂತ್ ನಿರ್ವಹಣೆಯ ಮಹತ್ವವನ್ನು ಒತ್ತಿಹೇಳಿದೆ. ರಾಜ್ಯದಲ್ಲಿ 1.63 ಲಕ್ಷ ಬೂತ್‌ಗಳಿದ್ದು, 1.5 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬಿಜೆಪಿ 20-20 ಸದಸ್ಯರ ಸಮಿತಿಗಳನ್ನು ರಚಿಸಿದೆ.ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಿಜೆಪಿ ಕುಟುಂಬದಲ್ಲಿ ಬೂತ್ ಮಟ್ಟದ ಕಾರ್ಯಕರ್ತ ಪ್ರಮುಖ ಕೊಂಡಿಯಾಗಿದ್ದು, ದೀಪಾವಳಿಯಂದು ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ ಆದ್ದರಿಂದ ಪಕ್ಷವು ಈ ಬಾರಿ 30 ಲಕ್ಷಕ್ಕೂ ಹೆಚ್ಚು ಬೂತ್ ಕಾರ್ಯಕರ್ತರಿಗೆ ಉಡುಗೊರೆಗಳನ್ನು ಕಳುಹಿಸಿದೆ ಎಂದು ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಬಹದ್ದೂರ್ ಪಾಠಕ್ ಹೇಳಿದರು. ಬಾಗಿಲ ತೋರಣ ಮತ್ತು ಕಮಲದ ಆಕಾರದ ಮಣ್ಣಿನ ದೀಪವನ್ನು ಒಳಗೊಂಡಿರುವ ಉಡುಗೊರೆ ಪೆಟ್ಟಿಗೆಗಳನ್ನು ಎಲ್ಲಾ ಬೂತ್ ಸಮಿತಿಗಳ ಸದಸ್ಯರಿಗೆ ಕಳುಹಿಸಲಾಗಿದೆ.

ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಾಠಕ್, “ಪಕ್ಷದ ಪ್ರಮುಖ ಗಮನವು 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ ಮತ್ತು ಜನರಲ್ಲಿ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ” ಎಂದು ಹೇಳಿದರು.

“ಜನರು ಕಮಲದ ದೀಪವನ್ನು ಬೆಳಗಿಸಿದಾಗ, ಕತ್ತಲೆ ಮಾತ್ರ ಮಾಯವಾಗುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಾರಂಭಿಸಿದ ಅಭಿವೃದ್ಧಿ ಯೋಜನೆಗಳು ಬಲಗೊಳ್ಳುತ್ತವೆ ಎಂದು ಪಾಠಕ್ ಹೇಳಿದರು.

2017 ರ ವಿಧಾನಸಭಾ ಚುನಾವಣೆಯಲ್ಲಿ, ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೂತ್ ನಿರ್ವಹಣಾ ಸೂತ್ರವನ್ನು ಜಾರಿಗೆ ತಂದರು ಮತ್ತು ಬೂತ್ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದರು. ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಬೂತ್ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಶಾ ಶುಕ್ರವಾರ ಲಖನೌಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ಕೂಡ ‘ಸಾಮಾಜಿಕ ಪ್ರತಿನಿಧಿ ಸಮ್ಮೇಳನ’, ಜಾತಿ ಆಧಾರಿತ ಸಮಾವೇಶಗಳನ್ನು ನಡೆಸುತ್ತಿದೆ.

ಇದನ್ನೂ ಓದಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆ, ಲಖಿಂಪುರ ಖೇರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ನ್ನು ತೆಗೆದುಹಾಕಿದ ಉತ್ತರ ಪ್ರದೇಶ ಸರ್ಕಾರ

ಇದನ್ನೂ ಓದಿ:  ಇದು ಉತ್ತರ ಪ್ರದೇಶದಲ್ಲಿ ನಡೆಯುತ್ತಿರಬಹುದು, ಇಲ್ಲಿ ಅಲ್ಲ: ಯುಪಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ