AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ
ನಯನಾ ರಾಜೀವ್
|

Updated on: Mar 24, 2024 | 8:46 AM

Share

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ