AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ
ನಯನಾ ರಾಜೀವ್
|

Updated on: Mar 24, 2024 | 8:46 AM

Share

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!