AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ
ನಯನಾ ರಾಜೀವ್
|

Updated on: Mar 24, 2024 | 8:46 AM

Share

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?